<p><strong>ಮೂಡಿಗೆರೆ:</strong> ತಾಲ್ಲೂಕಿನ ಬೆಟ್ಟಗೆರೆ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದ ಬೆಂಬಲಿತ ಅಭ್ಯರ್ಥಿ ಕೋಳೂರು ಕುಮಾರ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.</p>.<p>ಕೋಳೂರು ಕುಮಾರ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ನವೀನ್ ಕುಮಾರ್ ಪ್ರಕಟಿಸಿದರು. </p>.<p>ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಝಾಕೀರ್ ಹುಸೇನ್, ‘ಬೆಟ್ಟಗೆರೆ ಗ್ರಾಮ ಪಂಚಾಯಿತಿಯನ್ನು ನಮ್ಮ ರಾಜ್ಯದಲ್ಲೇ ಮಾದರಿ ಗ್ರಾಮ ಪಂಚಾಯಿತಿಯಾಗಿ ನೋಡಬಹುದಾಗಿದೆ. ಯಾವುದೇ ಪಕ್ಷ , ಜಾತಿಗೆ ಅಂಟಿಕೊಳ್ಳದೆ ವಿಶ್ವಾಸದಿಂದ ಅಧಿಕಾರ ಹಂಚಿಕೊಂಡು 5 ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತಿರುವುದು ಅಭಿನಂದನಾರ್ಹ. ಬಿಎಸ್ಪಿಯಲ್ಲಿ ವಿವಿಧ ಹುದ್ದೆಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿರುವ ಕುಮಾರ್, ಅಧ್ಯಕ್ಷರಾಗಿಯೂ ಉತ್ತಮ ಕಾರ್ಯ ನಿರ್ವಹಿಸುತ್ತಾರೆ ಎಂಬ ವಿಶ್ವಾಸವಿದೆʼ ಎಂದರು.</p>.<p>ಮಾಜಿ ಅಧ್ಯಕ್ಷ ದಿನೇಶ್ ಗೌಡ, ಗೋಪಾಲ್ ಗೌಡ, ಹೂವಮ್ಮ, ಸುಶೀಲಾ, ಕೃತಿ, ಸುಂದರಿ, ಎಲ್. ಬಿ ರಮೇಶ್, ಶಂಕರ್, ಬಕ್ಕಿ ಮಂಜುನಾಥ್, ,ಅಣ್ಣಪ್ಪ, ಲಕ್ಷ್ಮಣ್ ದೊಡ್ಡಯ್ಯ, ಶ್ರೀಕಾಂತ್, ಅಣ್ಣಪ್ಪ, ಸುಮಿತ್ರಾ, ಹೊನ್ನೇಶ್, ಲೋಕೇಶ್, ಪ್ರಾಣೇಶ್, ಸುರೇಶ್ ಸಂದೀಪ್, ಚಂದ್ರಶೇಖರ್ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ:</strong> ತಾಲ್ಲೂಕಿನ ಬೆಟ್ಟಗೆರೆ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದ ಬೆಂಬಲಿತ ಅಭ್ಯರ್ಥಿ ಕೋಳೂರು ಕುಮಾರ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.</p>.<p>ಕೋಳೂರು ಕುಮಾರ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ನವೀನ್ ಕುಮಾರ್ ಪ್ರಕಟಿಸಿದರು. </p>.<p>ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಝಾಕೀರ್ ಹುಸೇನ್, ‘ಬೆಟ್ಟಗೆರೆ ಗ್ರಾಮ ಪಂಚಾಯಿತಿಯನ್ನು ನಮ್ಮ ರಾಜ್ಯದಲ್ಲೇ ಮಾದರಿ ಗ್ರಾಮ ಪಂಚಾಯಿತಿಯಾಗಿ ನೋಡಬಹುದಾಗಿದೆ. ಯಾವುದೇ ಪಕ್ಷ , ಜಾತಿಗೆ ಅಂಟಿಕೊಳ್ಳದೆ ವಿಶ್ವಾಸದಿಂದ ಅಧಿಕಾರ ಹಂಚಿಕೊಂಡು 5 ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತಿರುವುದು ಅಭಿನಂದನಾರ್ಹ. ಬಿಎಸ್ಪಿಯಲ್ಲಿ ವಿವಿಧ ಹುದ್ದೆಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿರುವ ಕುಮಾರ್, ಅಧ್ಯಕ್ಷರಾಗಿಯೂ ಉತ್ತಮ ಕಾರ್ಯ ನಿರ್ವಹಿಸುತ್ತಾರೆ ಎಂಬ ವಿಶ್ವಾಸವಿದೆʼ ಎಂದರು.</p>.<p>ಮಾಜಿ ಅಧ್ಯಕ್ಷ ದಿನೇಶ್ ಗೌಡ, ಗೋಪಾಲ್ ಗೌಡ, ಹೂವಮ್ಮ, ಸುಶೀಲಾ, ಕೃತಿ, ಸುಂದರಿ, ಎಲ್. ಬಿ ರಮೇಶ್, ಶಂಕರ್, ಬಕ್ಕಿ ಮಂಜುನಾಥ್, ,ಅಣ್ಣಪ್ಪ, ಲಕ್ಷ್ಮಣ್ ದೊಡ್ಡಯ್ಯ, ಶ್ರೀಕಾಂತ್, ಅಣ್ಣಪ್ಪ, ಸುಮಿತ್ರಾ, ಹೊನ್ನೇಶ್, ಲೋಕೇಶ್, ಪ್ರಾಣೇಶ್, ಸುರೇಶ್ ಸಂದೀಪ್, ಚಂದ್ರಶೇಖರ್ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>