ಭದ್ರಾ ಅಭಯಾರಣ್ಯದ ಪ್ರದೇಶದ ತಾಳಿಕೆ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರವಾಸಿಗರ ಭೇಟಿ ಸಂಖ್ಯೆ ನಿಗದಿಪಡಿಸಬೇಕು. ಕೊರತೆಗಳನ್ನು ನಿವಾರಿಸಬೇಕು. ಅರಣ್ಯದಲ್ಲಿ ಕಟ್ಟಡ ಕಾಮಗಾರಿ ಕೈಗೆತ್ತಿಕೊಳ್ಳುವುದನ್ನು ಕೈಬಿಡಬೇಕು ಎಂದು ಭದ್ರಾ ವೈಲ್ಡ್ಲೈಫ್ ಕನ್ಸರ್ವೇಷನ್ ಟ್ರಸ್ಟ್ನ ಡಿ.ವಿ.ಗಿರೀಶ್, ರಾಜ್ಯ ವನ್ಯಜೀವಿ ಮಂಡಳಿ ಮಾಜಿ ಸದಸ್ಯ ಸ.ಗಿರಿಜಾಶಂಕರ, ವೈಲ್ಡ್ಕ್ಯಾಟ್-‘ಸಿ’ನ ಶ್ರೀದೇವ್ ಹುಲಿಕೆರೆ ಒತ್ತಾಯಿಸಿದ್ದಾರೆ.