<p><strong>ಅಜ್ಜಂಪುರ:</strong> ‘ಭದ್ರಾ ಮೇಲ್ದಂಡೆ ಯೋಜನೆಗಾಗಿ ವಶಕ್ಕೆ ಪಡೆಯುತ್ತಿರುವ ಜಮೀನಿಗೆ ನಿಗದಿಗೊಳಿಸಿರುವ ಪರಿಹಾರದ ಮೊತ್ತ ಹೆಚ್ಚಿಸಬೇಕು’ ಎಂದು ಯೋಜನೆಯಿಂದ ಭೂಮಿ ಕಳೆದುಕೊಳ್ಳುವ ಸಂತ್ರಸ್ತ ರೈತರು ಒತ್ತಾಯಿಸಿದರು.</p>.<p>ಪಟ್ಟಣದಲ್ಲಿ ಸೋಮವಾರ ನಡೆದ ಭದ್ರಾ ಯೋಜನೆಯಲ್ಲಿ ಜಮೀನು ಕಳೆದುಕೊಳ್ಳುವ ರೈತರ ಸಭೆಯಲ್ಲಿ ಮಾತನಾಡಿದ ರೈತ ರವಿಕುಮಾರ್, ‘ಒಂದೆರಡು ಕಿ.ಮೀ. ಅಂತರದ ಬಾಸೂರು, ಕೆದಿಗೆರೆ, ಚಿಕ್ಕನಲ್ಲೂರಿನಲ್ಲಿ ಎಕರೆಗೆ ₹ 1 ಕೋಟಿ ಪರಿಹಾರ ನಿಗದಿಗೊಳಿಸಿದೆ. ಆದರೆ, ನಮ್ಮ ಭಾಗದ ಚಿಣ್ಣಾಪುರ, ಸೌತನಹಳ್ಳಿಯಲ್ಲಿ ₹ 3 ಲಕ್ಷ, ಕಾಟಿಗನರೆಯಲ್ಲಿ ₹ 6 ಲಕ್ಷ, ಸೊಲ್ಲಾಪುರದಲ್ಲಿ ₹ 11 ಲಕ್ಷ ಪರಿಹಾರ ನಿಗದಿ ಮಾಡಲಾಗಿದೆ. ಇಂತಹ ತಾರತಮ್ಯ ಬಿಟ್ಟು ಸರಿಯಾದ ಪರಿಹಾರ ನೀಡಿ’ ಎಂದು ಆಗ್ರಹಿಸಿದರು.</p>.<p>‘ಹಿಂದೆ ಗೌರಾಪುರದಲ್ಲಿ ನಡೆದ ಸಭೆಯಲ್ಲಿ ಎಕರೆಗೆ ₹ 40 ಲಕ್ಷ ಏಕರೂಪ ದರ ನಿಗದಿಗೊಳಿಸುವಂತೆ ಒತ್ತಾಯಿಸಿದ್ದೆವು. ಸರ್ಕಾರದ ಗಮನಕ್ಕೆ ತರುವುದಾಗಿ ಹಿಂದಿನ ಉಪ ವಿಭಾಗಾಧಿಕಾರಿ ತಿಳಿಸಿದ್ದರು. ಅದು ಕಾರ್ಯರೂಪಗೊಂಡಿಲ್ಲ. ಪರಿಹಾರ ಮೊತ್ತವೂ ಹೆಚ್ಚಳವಾಗಿಲ್ಲ’ ಎಂದು ರೈತ ಜಯಪ್ಪ ದೂರಿದರು.</p>.<p>‘ಜನಪ್ರತಿನಿಧಿಗಳು ಬೆಂಬಲ ನೀಡಬೇಕಿತ್ತು. ಸರ್ಕಾರಕ್ಕೆ ಸಂತ್ರಸ್ತರ ಭವಿಷ್ಯದ ಬಗ್ಗೆ ಬೆಳಕು ಚೆಲ್ಲಿ, ಹೆಚ್ಚುವರಿ ಪರಿಹಾರಕ್ಕೆ ಮುಖ್ಯಮಂತ್ರಿಗೆ ಒತ್ತಡ ಹೇರಬೇಕಿತ್ತು. ಈವರೆಗೆ ಅಂತಹ ಪ್ರಾಮಾಣಿಕ ಪ್ರಯತ್ನ ನಡೆದಿಲ್ಲ’ ಎಂದು ರೈತ ಮಲ್ಲೇಶ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಸರ್ಕಾರ ನಿಗದಿಗೊಳಿಸಿದ ದರ ನಿಕೃಷ್ಟವಾಗಿದೆ. ಇದನ್ನು ಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು, ಹೆಚ್ಚುವರಿ ಹಣ ನಿಗದಿಗೊಳಿಸುವಂತೆ ಕೋರಲಾಗುವುದು’ ಎಂದು ರೈತರು ತಿಳಿಸಿದರು. ಹಲವು ಗ್ರಾಮಗಳ ರೈತರು ಭಾಗವಹಿಸಿದ್ದರು.</p>.<p>ಅಜ್ಜಂಪುರ ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ, ಎಇಇ ಸುರೇಶ್, ಇಇ ಪರಮೇಶ್ವರಪ್ಪ, ಭೂ ಸ್ವಾಧೀನ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಜ್ಜಂಪುರ:</strong> ‘ಭದ್ರಾ ಮೇಲ್ದಂಡೆ ಯೋಜನೆಗಾಗಿ ವಶಕ್ಕೆ ಪಡೆಯುತ್ತಿರುವ ಜಮೀನಿಗೆ ನಿಗದಿಗೊಳಿಸಿರುವ ಪರಿಹಾರದ ಮೊತ್ತ ಹೆಚ್ಚಿಸಬೇಕು’ ಎಂದು ಯೋಜನೆಯಿಂದ ಭೂಮಿ ಕಳೆದುಕೊಳ್ಳುವ ಸಂತ್ರಸ್ತ ರೈತರು ಒತ್ತಾಯಿಸಿದರು.</p>.<p>ಪಟ್ಟಣದಲ್ಲಿ ಸೋಮವಾರ ನಡೆದ ಭದ್ರಾ ಯೋಜನೆಯಲ್ಲಿ ಜಮೀನು ಕಳೆದುಕೊಳ್ಳುವ ರೈತರ ಸಭೆಯಲ್ಲಿ ಮಾತನಾಡಿದ ರೈತ ರವಿಕುಮಾರ್, ‘ಒಂದೆರಡು ಕಿ.ಮೀ. ಅಂತರದ ಬಾಸೂರು, ಕೆದಿಗೆರೆ, ಚಿಕ್ಕನಲ್ಲೂರಿನಲ್ಲಿ ಎಕರೆಗೆ ₹ 1 ಕೋಟಿ ಪರಿಹಾರ ನಿಗದಿಗೊಳಿಸಿದೆ. ಆದರೆ, ನಮ್ಮ ಭಾಗದ ಚಿಣ್ಣಾಪುರ, ಸೌತನಹಳ್ಳಿಯಲ್ಲಿ ₹ 3 ಲಕ್ಷ, ಕಾಟಿಗನರೆಯಲ್ಲಿ ₹ 6 ಲಕ್ಷ, ಸೊಲ್ಲಾಪುರದಲ್ಲಿ ₹ 11 ಲಕ್ಷ ಪರಿಹಾರ ನಿಗದಿ ಮಾಡಲಾಗಿದೆ. ಇಂತಹ ತಾರತಮ್ಯ ಬಿಟ್ಟು ಸರಿಯಾದ ಪರಿಹಾರ ನೀಡಿ’ ಎಂದು ಆಗ್ರಹಿಸಿದರು.</p>.<p>‘ಹಿಂದೆ ಗೌರಾಪುರದಲ್ಲಿ ನಡೆದ ಸಭೆಯಲ್ಲಿ ಎಕರೆಗೆ ₹ 40 ಲಕ್ಷ ಏಕರೂಪ ದರ ನಿಗದಿಗೊಳಿಸುವಂತೆ ಒತ್ತಾಯಿಸಿದ್ದೆವು. ಸರ್ಕಾರದ ಗಮನಕ್ಕೆ ತರುವುದಾಗಿ ಹಿಂದಿನ ಉಪ ವಿಭಾಗಾಧಿಕಾರಿ ತಿಳಿಸಿದ್ದರು. ಅದು ಕಾರ್ಯರೂಪಗೊಂಡಿಲ್ಲ. ಪರಿಹಾರ ಮೊತ್ತವೂ ಹೆಚ್ಚಳವಾಗಿಲ್ಲ’ ಎಂದು ರೈತ ಜಯಪ್ಪ ದೂರಿದರು.</p>.<p>‘ಜನಪ್ರತಿನಿಧಿಗಳು ಬೆಂಬಲ ನೀಡಬೇಕಿತ್ತು. ಸರ್ಕಾರಕ್ಕೆ ಸಂತ್ರಸ್ತರ ಭವಿಷ್ಯದ ಬಗ್ಗೆ ಬೆಳಕು ಚೆಲ್ಲಿ, ಹೆಚ್ಚುವರಿ ಪರಿಹಾರಕ್ಕೆ ಮುಖ್ಯಮಂತ್ರಿಗೆ ಒತ್ತಡ ಹೇರಬೇಕಿತ್ತು. ಈವರೆಗೆ ಅಂತಹ ಪ್ರಾಮಾಣಿಕ ಪ್ರಯತ್ನ ನಡೆದಿಲ್ಲ’ ಎಂದು ರೈತ ಮಲ್ಲೇಶ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಸರ್ಕಾರ ನಿಗದಿಗೊಳಿಸಿದ ದರ ನಿಕೃಷ್ಟವಾಗಿದೆ. ಇದನ್ನು ಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು, ಹೆಚ್ಚುವರಿ ಹಣ ನಿಗದಿಗೊಳಿಸುವಂತೆ ಕೋರಲಾಗುವುದು’ ಎಂದು ರೈತರು ತಿಳಿಸಿದರು. ಹಲವು ಗ್ರಾಮಗಳ ರೈತರು ಭಾಗವಹಿಸಿದ್ದರು.</p>.<p>ಅಜ್ಜಂಪುರ ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ, ಎಇಇ ಸುರೇಶ್, ಇಇ ಪರಮೇಶ್ವರಪ್ಪ, ಭೂ ಸ್ವಾಧೀನ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>