<p><strong>ಕಳಸ(ಚಿಕ್ಕಮಗಳೂರು):</strong> ಭದ್ರಾ ನದಿಗೆ ಪಿಕ್ಅಪ್ ವಾಹನ ಬಿದ್ದು ಮಗ ಕಣ್ಮರೆಯಾದ ದುಃಖ ಸಹಿಸದೆ ತಾಯಿ ಕೂಡ ಗುರುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಗಣಪತಿಕಟ್ಟೆ ಶಮಂತ್(22) ಅವರು ಓಡಿಸುತ್ತಿದ್ದ ಪಿಕ್ಅಪ್ ವಾಹನ ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ರಸ್ತೆ ಪಕ್ಕದಲ್ಲಿ ಹರಿಯುವ ಭದ್ರಾ ನದಿಗೆ ಗುರುವಾರ ಮಧ್ಯಾಹ್ನ ಉರುಳಿತ್ತು. ಸಂಜೆಯಾದರೂ ಶಮಂತ್ ಪತ್ತೆಯಾಗಿಲ್ಲ.</p><p>ಅವರ ತಾಯಿ ರತ್ನಕಲಾ(45) ಅಪಘಾತ ನಡೆದ ಸ್ಥಳಕ್ಕೆ ತೆರಳಿ ಮಗನಿಗಾಗಿ ಹುಡುಕಾಡಿದ್ದರು. ಕಾಫಿ ತೋಟಕ್ಕೆ ಕಾರ್ಮಿಕರನ್ನು ಕರೆದುಕೊಂಡು ಹೋಗಿ ಕೆಲಸ ಮಾಡಿಸುವ ಮೇಸ್ತ್ರಿಯಾಗಿದ್ದ ರತ್ನಕಲಾ ಅವರು, ಇದೇ ಉದ್ದೇಶಕ್ಕೆ ಮಗನಿಗೆ ಪಿಕ್ ಅಪ್ ವಾಹನವನ್ನು 6 ತಿಂಗಳ ಹಿಂದೆ ಕೊಡಿಸಿದ್ದರು. ಮಗ ವಾಹನದ ಸಮೇತ ಭದ್ರಾ ನದಿಗೆ ಬಿದ್ದಿರುವುದರಿಂದ ರತ್ನಕಲಾ ಆಘಾತಗೊಂಡಿದ್ದರು.</p><p>ರಾತ್ರಿ 10.30ರ ವೇಳೆಗೆ ಮನೆಯ ಸಮೀಪದ ಕೆರೆಗೆ ರತ್ನಕಲಾ ಹಾರಿದ್ದಾರೆ. ಅವರನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನ ಮಾಡಿದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ. ತಾಯಿ ಮತ್ತು ಮಗನ ಸಾವಿನಿಂದ ಗಣಪತಿಕಟ್ಟೆ ಪ್ರದೇಶದಲ್ಲಿ ದುಃಖ ಆವರಿಸಿದೆ. </p><p>ನೂರಾರು ಕಾರ್ಮಿಕರು ಶುಕ್ರವಾರ ಕೆಲಸಕ್ಕೆ ಹೋಗದೆ ರತ್ನಕಲಾ ಅವರ ಮನೆ ಬಳಿ ಜಮಾಯಿಸಿದ್ದಾರೆ. ಭದ್ರಾ ನದಿಯಲ್ಲಿ ಶಮಂತ್ ಶವ ಹುಡುಕಾಟ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಳಸ(ಚಿಕ್ಕಮಗಳೂರು):</strong> ಭದ್ರಾ ನದಿಗೆ ಪಿಕ್ಅಪ್ ವಾಹನ ಬಿದ್ದು ಮಗ ಕಣ್ಮರೆಯಾದ ದುಃಖ ಸಹಿಸದೆ ತಾಯಿ ಕೂಡ ಗುರುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಗಣಪತಿಕಟ್ಟೆ ಶಮಂತ್(22) ಅವರು ಓಡಿಸುತ್ತಿದ್ದ ಪಿಕ್ಅಪ್ ವಾಹನ ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ರಸ್ತೆ ಪಕ್ಕದಲ್ಲಿ ಹರಿಯುವ ಭದ್ರಾ ನದಿಗೆ ಗುರುವಾರ ಮಧ್ಯಾಹ್ನ ಉರುಳಿತ್ತು. ಸಂಜೆಯಾದರೂ ಶಮಂತ್ ಪತ್ತೆಯಾಗಿಲ್ಲ.</p><p>ಅವರ ತಾಯಿ ರತ್ನಕಲಾ(45) ಅಪಘಾತ ನಡೆದ ಸ್ಥಳಕ್ಕೆ ತೆರಳಿ ಮಗನಿಗಾಗಿ ಹುಡುಕಾಡಿದ್ದರು. ಕಾಫಿ ತೋಟಕ್ಕೆ ಕಾರ್ಮಿಕರನ್ನು ಕರೆದುಕೊಂಡು ಹೋಗಿ ಕೆಲಸ ಮಾಡಿಸುವ ಮೇಸ್ತ್ರಿಯಾಗಿದ್ದ ರತ್ನಕಲಾ ಅವರು, ಇದೇ ಉದ್ದೇಶಕ್ಕೆ ಮಗನಿಗೆ ಪಿಕ್ ಅಪ್ ವಾಹನವನ್ನು 6 ತಿಂಗಳ ಹಿಂದೆ ಕೊಡಿಸಿದ್ದರು. ಮಗ ವಾಹನದ ಸಮೇತ ಭದ್ರಾ ನದಿಗೆ ಬಿದ್ದಿರುವುದರಿಂದ ರತ್ನಕಲಾ ಆಘಾತಗೊಂಡಿದ್ದರು.</p><p>ರಾತ್ರಿ 10.30ರ ವೇಳೆಗೆ ಮನೆಯ ಸಮೀಪದ ಕೆರೆಗೆ ರತ್ನಕಲಾ ಹಾರಿದ್ದಾರೆ. ಅವರನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನ ಮಾಡಿದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ. ತಾಯಿ ಮತ್ತು ಮಗನ ಸಾವಿನಿಂದ ಗಣಪತಿಕಟ್ಟೆ ಪ್ರದೇಶದಲ್ಲಿ ದುಃಖ ಆವರಿಸಿದೆ. </p><p>ನೂರಾರು ಕಾರ್ಮಿಕರು ಶುಕ್ರವಾರ ಕೆಲಸಕ್ಕೆ ಹೋಗದೆ ರತ್ನಕಲಾ ಅವರ ಮನೆ ಬಳಿ ಜಮಾಯಿಸಿದ್ದಾರೆ. ಭದ್ರಾ ನದಿಯಲ್ಲಿ ಶಮಂತ್ ಶವ ಹುಡುಕಾಟ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>