ತಾಲ್ಲೂಕಿನ ಪಂಚನಹಳ್ಳಿ, ಯಗಟಿ ಮತ್ತು ಚೌಳಹಿರಿಯೂರುನಲ್ಲಿ ನಡೆಯುತ್ತಿರುವ ಮೊರಾರ್ಜಿ ವಸತಿ ಶಾಲೆಗಳಿಗೆ ಕಟ್ಟಡ ನಿರ್ಮಾಣಕ್ಕೆ, ವಿದ್ಯುತ್ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ತಾಲ್ಲೂಕಿನ ಚೌಳಹಿರಿಯೂರು, ಕೆ.ಬಸವನಹಳ್ಳಿ, ಯಳಗೊಂಡನಹಳ್ಳಿ ಹಾಗೂ ಸರಸ್ವತಿಪುರದಲ್ಲಿ ಹೊಸದಾಗಿ ಸಬ್ಸ್ಟೇಷನ್ ಆರಂಭಿಸುವ ಮತ್ತು ಕೇಂದ್ರ ಸರ್ಕಾರದ ಮನವೊಲಿಸಿ ಬೆಂಬಲ ಬೆಲೆ ಕೊಬ್ಬರಿ ಖರೀದಿ ಕೇಂದ್ರವನ್ನು ಆರಂಭಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದೇನೆ. ಕಡೂರು ತಾಲ್ಲೂಕಿನಲ್ಲಿ ಎಲ್ಲ ಬೆಳೆಗಳಿಗೂ ನಷ್ಟ ಪರಿಹಾರ ನೀಡಲು ಸರ್ಕಾರಕ್ಕೆ ಒತ್ತಾಯಿಸಿದ್ದೇನೆ ಎಂದರು.