<p><strong>ಕಡೂರು:</strong> ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯಲ್ಲಿ ಭೂಮಿ ಕಳೆದುಕೊಳ್ಳುವ ತಾಲ್ಲೂಕಿನ ರೈತರಿಗೆ ಮಾರುಕಟ್ಟೆ ಬೆಲೆಯ ನಾಲ್ಕು ಪಟ್ಟು ಅಧಿಕ ಪರಿಹಾರ ನಿಗದಿಯಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಕುಮಾರ್ ತಿಳಿಸಿದರು.</p>.<p>ತಾಲ್ಲೂಕಿನ 9ನೇ ಮೈಲಿಕಲ್ಲಿನ ಪ್ರೌಢಶಾಲಾ ಆವರಣದಲ್ಲಿ ಮಂಗಳವಾರ ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ಶಾಖಾ ಕಾಲುವೆ ಕಾಮಗಾರಿಯಲ್ಲಿ ಭೂಮಿ ಕಳೆದುಕೊಳ್ಳುವವರ ಪುನರ್ವಸತಿ ಬಗ್ಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ಕಾಲುವೆ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಲುವೆಯಿಂದ ತಾಲ್ಲೂಕಿನ ಹಲವಾರು ಕೆರೆಗಳು ತುಂಬಲಿವೆ. ಈಗಾಗಲೇ ಕಾಲುವೆ ನಿರ್ಮಾಣಗೊಳ್ಳುತ್ತಿದ್ದು, ಈ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ಪರಿಹಾರದ ಮೊತ್ತವನ್ನು ಸರ್ಕಾರ ನಿಗದಿಪಡಿಸಿದೆ. ಶೇ 50 ಭೂಮಿ ಕಳೆದುಕೊಳ್ಳುವವರಿಗೆ ₹ 5 ಲಕ್ಷ ಹೆಚ್ಚುವರಿಯಾಗಿ ನೀಡುವ ಮತ್ತು ಯೋಜನೆಯ ವ್ಯಾಪ್ತಿಯಲ್ಲಿ ವಾಸದ ಮನೆಯಿದ್ದರೆ ಅದಕ್ಕೆ ಪರಿಹಾರದ ಜೊತೆ ಹೆಚ್ಚುವರಿಯಾಗಿ ಸ್ಥಳಾಂತರಗೊಳಿಸಲು ₹ 50 ಸಾವಿರ ನೀಡುವ ಅವಕಾಶವಿದೆ’ ಎಂದರು.</p>.<p>ತರೀಕೆರೆ ಉಪ ವಿಭಾಗಾಧಿಕಾರಿ ರೇಣುಕಾಪ್ರಸಾದ್ ಮಾತನಾಡಿ, ‘ಈ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗಾಗಿಯೇ ವಿಶೇಷ ಕೋರ್ಟ್ ನಡೆಸಿ, ಎಲ್ಲಾ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಜೆ.ಉಮೇಶ್ ಮಾತನಾಡಿ, ‘ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವ ರೈತರ ಪೈಕಿ ಯಾವುದಾದರೂ ಪೌತಿ ಖಾತೆ ಮತ್ತಿತರ ಸಮಸ್ಯೆಗಳಿದ್ದರೆ ಗ್ರಾಮಲೆಕ್ಕಿಗರು ಪಟ್ಟಿ ಮಾಡಬೇಕು. ಅಂತಹ ಪ್ರಕರಣಗಳ ಪರಿಶೀಲನೆ ನಡೆಸಿ ಸಮಸ್ಯೆ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಯಗಟಿ ಕಂದಾಯ ನಿರೀಕ್ಷಕ ರಮೇಶ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು:</strong> ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯಲ್ಲಿ ಭೂಮಿ ಕಳೆದುಕೊಳ್ಳುವ ತಾಲ್ಲೂಕಿನ ರೈತರಿಗೆ ಮಾರುಕಟ್ಟೆ ಬೆಲೆಯ ನಾಲ್ಕು ಪಟ್ಟು ಅಧಿಕ ಪರಿಹಾರ ನಿಗದಿಯಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಕುಮಾರ್ ತಿಳಿಸಿದರು.</p>.<p>ತಾಲ್ಲೂಕಿನ 9ನೇ ಮೈಲಿಕಲ್ಲಿನ ಪ್ರೌಢಶಾಲಾ ಆವರಣದಲ್ಲಿ ಮಂಗಳವಾರ ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ಶಾಖಾ ಕಾಲುವೆ ಕಾಮಗಾರಿಯಲ್ಲಿ ಭೂಮಿ ಕಳೆದುಕೊಳ್ಳುವವರ ಪುನರ್ವಸತಿ ಬಗ್ಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ಕಾಲುವೆ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಲುವೆಯಿಂದ ತಾಲ್ಲೂಕಿನ ಹಲವಾರು ಕೆರೆಗಳು ತುಂಬಲಿವೆ. ಈಗಾಗಲೇ ಕಾಲುವೆ ನಿರ್ಮಾಣಗೊಳ್ಳುತ್ತಿದ್ದು, ಈ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ಪರಿಹಾರದ ಮೊತ್ತವನ್ನು ಸರ್ಕಾರ ನಿಗದಿಪಡಿಸಿದೆ. ಶೇ 50 ಭೂಮಿ ಕಳೆದುಕೊಳ್ಳುವವರಿಗೆ ₹ 5 ಲಕ್ಷ ಹೆಚ್ಚುವರಿಯಾಗಿ ನೀಡುವ ಮತ್ತು ಯೋಜನೆಯ ವ್ಯಾಪ್ತಿಯಲ್ಲಿ ವಾಸದ ಮನೆಯಿದ್ದರೆ ಅದಕ್ಕೆ ಪರಿಹಾರದ ಜೊತೆ ಹೆಚ್ಚುವರಿಯಾಗಿ ಸ್ಥಳಾಂತರಗೊಳಿಸಲು ₹ 50 ಸಾವಿರ ನೀಡುವ ಅವಕಾಶವಿದೆ’ ಎಂದರು.</p>.<p>ತರೀಕೆರೆ ಉಪ ವಿಭಾಗಾಧಿಕಾರಿ ರೇಣುಕಾಪ್ರಸಾದ್ ಮಾತನಾಡಿ, ‘ಈ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗಾಗಿಯೇ ವಿಶೇಷ ಕೋರ್ಟ್ ನಡೆಸಿ, ಎಲ್ಲಾ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಜೆ.ಉಮೇಶ್ ಮಾತನಾಡಿ, ‘ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವ ರೈತರ ಪೈಕಿ ಯಾವುದಾದರೂ ಪೌತಿ ಖಾತೆ ಮತ್ತಿತರ ಸಮಸ್ಯೆಗಳಿದ್ದರೆ ಗ್ರಾಮಲೆಕ್ಕಿಗರು ಪಟ್ಟಿ ಮಾಡಬೇಕು. ಅಂತಹ ಪ್ರಕರಣಗಳ ಪರಿಶೀಲನೆ ನಡೆಸಿ ಸಮಸ್ಯೆ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಯಗಟಿ ಕಂದಾಯ ನಿರೀಕ್ಷಕ ರಮೇಶ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>