<p><strong>ಬೀರೂರು</strong> (ಕಡೂರು): ಸ್ವತಂತ್ರ ಭಾರತದ ಪ್ರಜೆಗಳಾಗಿ ನಾವು ದೇಶದ ಪ್ರಗತಿಗೆ ಕೈಜೋಡಿಸಿದರೆ ನಮ್ಮದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತದೆ ಎಂದು ಪುರಸಭೆ ಅಧ್ಯಕ್ಷೆ ಭಾಗ್ಯಲಕ್ಷ್ಮಿ ಮೋಹನ್ ಅಭಿಪ್ರಾಯಪಟ್ಟರು.</p>.<p>ಬೀರೂರು ಪಟ್ಟಣದ ಕೆಎಲ್ಕೆ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>ಸ್ವಾತಂತ್ರ್ಯವನ್ನು ಅನುಭವಿಸುವುದು ಮಾತ್ರವಲ್ಲ, ಅದನ್ನು ಪಡೆಯಲು ಶ್ರಮಿಸಿದವರ ಮತ್ತು ದೇಶದ ಗೌರವ ಹೆಚ್ಚಿಸುವ ನಿಟ್ಟಿನಲ್ಲಿ ನಮ್ಮ ನಡೆ-ನುಡಿ ಇರಲಿ. ಭವ್ಯಭಾರತ ಜಗತ್ತಿನ ಮುಂಚೂಣಿ ರಾಷ್ಟ್ರವಾಗಲಿ ಎಂದು ಆಶಿಸಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಬುರ್ಹಾನುದ್ದೀನ್ ಚೋಪ್ದಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುರಸಭೆ ಮಾಜಿ ಅಧ್ಯಕ್ಷೆ ವನಿತಾ ಮಧುಬಾವಿಮನೆ, ಸದಸ್ಯ ಕೆ.ಆರ್.ರಘು, ಬಿ.ಆರ್.ಮೋಹನ್ ಕುಮಾರ್, ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ಶೇಖರಪ್ಪ ಮಾತನಾಡಿದರು.</p>.<p>ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ, ಮಾಜಿ ಸೈನಿಕರು, ಸ್ವಾತಂತ್ರ್ಯ ಹೋರಾಟಗಾರರು, ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು. ಪಥ ಸಂಚಲನ ನಡೆಸಿದ ವಿವಿಧ ಶಾಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.</p>.<p>ಪುರಸಭೆ ಮುಖ್ಯಾಧಿಕಾರಿ ಜಿ.ಪ್ರಕಾಶ್, ಪುರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು, ಪೊಲೀಸ್, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ, ಪಟ್ಟಣದ ವಿವಿಧ ಶಾಲೆಯ ಮಕ್ಕಳು, ಪೋಷಕರು ಭಾಗವಹಿಸಿದ್ದರು.</p>.<p>ಪಟ್ಟಣದ ವಿವಿಧ ಶಾಲೆಗಳು, ಪುರಸಭೆ, ನಾಡಕಚೇರಿ, ಆಟೊ ನಿಲ್ದಾಣ, ಟ್ಯಾಕ್ಸಿ ನಿಲ್ದಾಣ, ಗೂಡ್ಸ್ ವಾಹನ ನಿಲ್ದಾಣ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ದ್ವಜಾರೋಹಣ ನೆರವೇರಿಸಿ ಸಿಹಿ ಹಂಚಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀರೂರು</strong> (ಕಡೂರು): ಸ್ವತಂತ್ರ ಭಾರತದ ಪ್ರಜೆಗಳಾಗಿ ನಾವು ದೇಶದ ಪ್ರಗತಿಗೆ ಕೈಜೋಡಿಸಿದರೆ ನಮ್ಮದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತದೆ ಎಂದು ಪುರಸಭೆ ಅಧ್ಯಕ್ಷೆ ಭಾಗ್ಯಲಕ್ಷ್ಮಿ ಮೋಹನ್ ಅಭಿಪ್ರಾಯಪಟ್ಟರು.</p>.<p>ಬೀರೂರು ಪಟ್ಟಣದ ಕೆಎಲ್ಕೆ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>ಸ್ವಾತಂತ್ರ್ಯವನ್ನು ಅನುಭವಿಸುವುದು ಮಾತ್ರವಲ್ಲ, ಅದನ್ನು ಪಡೆಯಲು ಶ್ರಮಿಸಿದವರ ಮತ್ತು ದೇಶದ ಗೌರವ ಹೆಚ್ಚಿಸುವ ನಿಟ್ಟಿನಲ್ಲಿ ನಮ್ಮ ನಡೆ-ನುಡಿ ಇರಲಿ. ಭವ್ಯಭಾರತ ಜಗತ್ತಿನ ಮುಂಚೂಣಿ ರಾಷ್ಟ್ರವಾಗಲಿ ಎಂದು ಆಶಿಸಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಬುರ್ಹಾನುದ್ದೀನ್ ಚೋಪ್ದಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುರಸಭೆ ಮಾಜಿ ಅಧ್ಯಕ್ಷೆ ವನಿತಾ ಮಧುಬಾವಿಮನೆ, ಸದಸ್ಯ ಕೆ.ಆರ್.ರಘು, ಬಿ.ಆರ್.ಮೋಹನ್ ಕುಮಾರ್, ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ಶೇಖರಪ್ಪ ಮಾತನಾಡಿದರು.</p>.<p>ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ, ಮಾಜಿ ಸೈನಿಕರು, ಸ್ವಾತಂತ್ರ್ಯ ಹೋರಾಟಗಾರರು, ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು. ಪಥ ಸಂಚಲನ ನಡೆಸಿದ ವಿವಿಧ ಶಾಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.</p>.<p>ಪುರಸಭೆ ಮುಖ್ಯಾಧಿಕಾರಿ ಜಿ.ಪ್ರಕಾಶ್, ಪುರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು, ಪೊಲೀಸ್, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ, ಪಟ್ಟಣದ ವಿವಿಧ ಶಾಲೆಯ ಮಕ್ಕಳು, ಪೋಷಕರು ಭಾಗವಹಿಸಿದ್ದರು.</p>.<p>ಪಟ್ಟಣದ ವಿವಿಧ ಶಾಲೆಗಳು, ಪುರಸಭೆ, ನಾಡಕಚೇರಿ, ಆಟೊ ನಿಲ್ದಾಣ, ಟ್ಯಾಕ್ಸಿ ನಿಲ್ದಾಣ, ಗೂಡ್ಸ್ ವಾಹನ ನಿಲ್ದಾಣ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ದ್ವಜಾರೋಹಣ ನೆರವೇರಿಸಿ ಸಿಹಿ ಹಂಚಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>