ಮಂಗಳವಾರ ಬೆಳಿಗ್ಗೆ ಸ್ವಸ್ತಿವಾಚನ, ದೇವತಾರಾಧನೆ, ನಿತ್ಯಹೋಮ, ಬಲಿಪ್ರದಾನ, ವೈಭವೋತ್ಸವ ಮತ್ತು ಲಕ್ಷ್ಮೀರಂಗನಾಥಸ್ವಾಮಿಯವರ ಕಲ್ಯಾಣೋತ್ಸವ, ಗಜವಾಹನೋತ್ಸವ ನೆರವೇರಿತು. ಬುಧವಾರವೂ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿ ರಜತ ನಾಣ್ಯಗಳಿಂದ ಅಭಿಷೇಕ ನಡೆಸಲಾಯಿತು. ಬಳಿಕ ಅಲಂಕೃತ ಶ್ರೀದೇವಿ, ಭೂದೇವಿ ಸಹಿತ ಸ್ವಾಮಿಯ ಉತ್ಸವಮೂರ್ತಿಗಳನ್ನು ರಥಾರೋಹಣಕ್ಕಾಗಿ ಮಂಟಪಕ್ಕೆ ಕರೆತಂದು ಅಲ್ಲಿ ಮಂಟಪಡಿ ಸೇವೆ, ಶ್ರೀಕೃಷ್ಣ ಗಂಧೋತ್ಸವ, ರಥಾರೋಹಣ ನಡೆಸಲಾಯಿತು.