ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಡೂರು ಪುರಸಭೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಇಲ್ಲದ ಹಿನ್ನೆಲೆಯಲ್ಲಿ ಜೆಡಿಎಸ್ ಬೆಂಬಲ ಕೋರಿ ಸಂಸದ ಪ್ರಜ್ವಲ್ ಹಾಗೂ ವೈ.ಎಸ್.ವಿ.ದತ್ತ ಅವರೊಡನೆ ಸಮಾಲೋಚನೆ ನಡೆಸಲಾಗಿತ್ತು. ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಆದರೆ, ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಕೈಜೋಡಿಸಿ ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಸೇರುತ್ತೇವೆಂಬುದನ್ನು ನಿರೂಪಿಸಿದ್ದಾರೆ. ಆ ಪಕ್ಷದವರು ಕೋಮುವಾದಿಗಳ ವಿರುದ್ಧ ಮಾತನಾಡುತ್ತಿದ್ದರು. ಈಗ ಅವರೂ ಅದೇ ಶಕ್ತಿಗಳ ಜೊತೆ ಸೇರಿರುವುದು ಏನನ್ನು ಸೂಚಿಸುತ್ತದೆ ಎಂದು ಜನತೆ ಗಮನಿಸಲಿ’ ಎಂದರು.