‘ಫಾರಂ 53, 57ರಲ್ಲಿ ಹಕ್ಕುಪತ್ರಕ್ಕಾಗಿ ಸಾಕಷ್ಟು ಜನ ಈಗಾಗಲೇ ಹಣ ಕಟ್ಟಿದ್ದಾರೆ. ಆದರೆ, ಹಕ್ಕುಪತ್ರ ನೀಡಿಲ್ಲ. ಕೆಲವರನ್ನು ಖುದ್ದಾಗಿ ನಾನೇ ಶಾಸಕರ ಬಳಿ ಕರೆದೊಯ್ದು ಈ ವಿಷಯ ತಿಳಿಸಿದ್ದರೂ ಪ್ರಯೋಜನವಾಗಿಲ್ಲ. ತಾಲ್ಲೂಕು ಕಚೇರಿಯಲ್ಲಿ ಪ್ರತಿ ಕೆಲಸಕ್ಕೂ ಕಮಿಷನ್ ನೀಡಬೇಕಾಗಿದ್ದು, ಹಕ್ಕುಪತ್ರಕ್ಕೆ ಸಂಬಂಧಿಸಿದಂತೆ ಲಕ್ಷಾಂತರ ರೂಪಾಯಿ ನೀಡಬೇಕಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆರೋಪಗಳು ಕೇಳಿ ಬರುತ್ತಿದ್ದರೂ ಶಾಸಕರಿಂದ ಯಾವುದೇ ಪ್ರತಿಕ್ರಿಯೆ ಇಲ್ಲ, ಅವರಿಗೆ ಅಧಿಕಾರಿಗಳ ಮೇಲೆ ಹಿಡಿತವಿಲ್ಲ' ಎಂದು ದೂರಿದರು.