<p><strong>ಕೊಪ್ಪ:</strong> ‘ಡಿ.ಎನ್.ಜೀವರಾಜ್ ಶಾಸಕರಾಗಿದ್ದಾಗ ಕ್ಷೇತ್ರದಲ್ಲಿ 2,700ಕ್ಕಿಂತ ಹೆಚ್ಚು ರೈತರಿಗೆ ಹಕ್ಕು ಪತ್ರಗಳನ್ನು ನೀಡಿದ್ದರು. ಟಿ.ಡಿ.ರಾಜೇಗೌಡ ಅವರು ಶಾಸಕರಾಗಿ ನಾಲ್ಕು ವರ್ಷ ಕಳೆದರೂ ಹಕ್ಕುಪತ್ರಗಳಿಗೆ ಪಹಣಿ, ಖಾತೆ ಮಾಡಿಸಿ ಕೊಡುವಲ್ಲಿ ವಿಫಲರಾಗಿದ್ದಾರೆ’ ಎಂದು ಮಂಡಲ ಬಿಜೆಪಿ ಅಧ್ಯಕ್ಷ ಅದ್ದಡ ಸತೀಶ್ ಆರೋಪಿಸಿದ್ದಾರೆ.</p>.<p>ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು, ‘ಶಾಸಕರ ವೈಫಲ್ಯತೆಯನ್ನು ಖಂಡಿಸಿ ಹಾಗೂ ತಾಲ್ಲೂಕಿನ ಹಕ್ಕುಪತ್ರ ವಂಚಿತ ರೈತರೊಂದಿಗೆ ಜುಲೈ 4ರಂದು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಇಂಧನ ಸಚಿವ ವಿ.ಸುನಿಲ್ ಕುಮಾರ್ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<p>‘ಫಾರಂ 53, 57ರಲ್ಲಿ ಹಕ್ಕುಪತ್ರಕ್ಕಾಗಿ ಸಾಕಷ್ಟು ಜನ ಈಗಾಗಲೇ ಹಣ ಕಟ್ಟಿದ್ದಾರೆ. ಆದರೆ, ಹಕ್ಕುಪತ್ರ ನೀಡಿಲ್ಲ. ಕೆಲವರನ್ನು ಖುದ್ದಾಗಿ ನಾನೇ ಶಾಸಕರ ಬಳಿ ಕರೆದೊಯ್ದು ಈ ವಿಷಯ ತಿಳಿಸಿದ್ದರೂ ಪ್ರಯೋಜನವಾಗಿಲ್ಲ. ತಾಲ್ಲೂಕು ಕಚೇರಿಯಲ್ಲಿ ಪ್ರತಿ ಕೆಲಸಕ್ಕೂ ಕಮಿಷನ್ ನೀಡಬೇಕಾಗಿದ್ದು, ಹಕ್ಕುಪತ್ರಕ್ಕೆ ಸಂಬಂಧಿಸಿದಂತೆ ಲಕ್ಷಾಂತರ ರೂಪಾಯಿ ನೀಡಬೇಕಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆರೋಪಗಳು ಕೇಳಿ ಬರುತ್ತಿದ್ದರೂ ಶಾಸಕರಿಂದ ಯಾವುದೇ ಪ್ರತಿಕ್ರಿಯೆ ಇಲ್ಲ, ಅವರಿಗೆ ಅಧಿಕಾರಿಗಳ ಮೇಲೆ ಹಿಡಿತವಿಲ್ಲ' ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ:</strong> ‘ಡಿ.ಎನ್.ಜೀವರಾಜ್ ಶಾಸಕರಾಗಿದ್ದಾಗ ಕ್ಷೇತ್ರದಲ್ಲಿ 2,700ಕ್ಕಿಂತ ಹೆಚ್ಚು ರೈತರಿಗೆ ಹಕ್ಕು ಪತ್ರಗಳನ್ನು ನೀಡಿದ್ದರು. ಟಿ.ಡಿ.ರಾಜೇಗೌಡ ಅವರು ಶಾಸಕರಾಗಿ ನಾಲ್ಕು ವರ್ಷ ಕಳೆದರೂ ಹಕ್ಕುಪತ್ರಗಳಿಗೆ ಪಹಣಿ, ಖಾತೆ ಮಾಡಿಸಿ ಕೊಡುವಲ್ಲಿ ವಿಫಲರಾಗಿದ್ದಾರೆ’ ಎಂದು ಮಂಡಲ ಬಿಜೆಪಿ ಅಧ್ಯಕ್ಷ ಅದ್ದಡ ಸತೀಶ್ ಆರೋಪಿಸಿದ್ದಾರೆ.</p>.<p>ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು, ‘ಶಾಸಕರ ವೈಫಲ್ಯತೆಯನ್ನು ಖಂಡಿಸಿ ಹಾಗೂ ತಾಲ್ಲೂಕಿನ ಹಕ್ಕುಪತ್ರ ವಂಚಿತ ರೈತರೊಂದಿಗೆ ಜುಲೈ 4ರಂದು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಇಂಧನ ಸಚಿವ ವಿ.ಸುನಿಲ್ ಕುಮಾರ್ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<p>‘ಫಾರಂ 53, 57ರಲ್ಲಿ ಹಕ್ಕುಪತ್ರಕ್ಕಾಗಿ ಸಾಕಷ್ಟು ಜನ ಈಗಾಗಲೇ ಹಣ ಕಟ್ಟಿದ್ದಾರೆ. ಆದರೆ, ಹಕ್ಕುಪತ್ರ ನೀಡಿಲ್ಲ. ಕೆಲವರನ್ನು ಖುದ್ದಾಗಿ ನಾನೇ ಶಾಸಕರ ಬಳಿ ಕರೆದೊಯ್ದು ಈ ವಿಷಯ ತಿಳಿಸಿದ್ದರೂ ಪ್ರಯೋಜನವಾಗಿಲ್ಲ. ತಾಲ್ಲೂಕು ಕಚೇರಿಯಲ್ಲಿ ಪ್ರತಿ ಕೆಲಸಕ್ಕೂ ಕಮಿಷನ್ ನೀಡಬೇಕಾಗಿದ್ದು, ಹಕ್ಕುಪತ್ರಕ್ಕೆ ಸಂಬಂಧಿಸಿದಂತೆ ಲಕ್ಷಾಂತರ ರೂಪಾಯಿ ನೀಡಬೇಕಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆರೋಪಗಳು ಕೇಳಿ ಬರುತ್ತಿದ್ದರೂ ಶಾಸಕರಿಂದ ಯಾವುದೇ ಪ್ರತಿಕ್ರಿಯೆ ಇಲ್ಲ, ಅವರಿಗೆ ಅಧಿಕಾರಿಗಳ ಮೇಲೆ ಹಿಡಿತವಿಲ್ಲ' ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>