ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ಎಸ್ ರಂಗನಾಥ್ ಮಾತನಾಡಿ, ‘ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರ ಬಂದ ಕಾಲಘಟ್ಟದಿಂದ ಇಲ್ಲಿಯ ತನಕ ಬಿಜೆಪಿ ಬ್ರಾಹ್ಮಣರಿಗೆ ಅಧಿಕಾರ ನೀಡಿದೆ. ಈ ಹಿಂದೆ ಎನ್.ಆರ್.ಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿ ಜೆ.ಜೆ.ನಾಗರಾಜ್, ಅಕ್ರಮ-ಸಕ್ರಮ ಸಮಿತಿ ಸದಸ್ಯರಾಗಿ ಹೊಸೂರು ಮಂಜುನಾಥ್, ಕಾಫಿ ಮಂಡಳಿ ಉಪಾಧ್ಯಕ್ಷರಾಗಿ ಮಹಾಬಲರಾವ್, ಶೃಂಗೇರಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಟಿ.ಕೆ ಪರಾಶರ, ಮ್ಯಾಮ್ಕೋಸ್ ಉಪಾಧ್ಯಕ್ಷರಾಗಿ ಯಡಗೆರೆ ಸುಬ್ರಮಣ್ಯ, ಮ್ಯಾಮ್ಕೋಸ್ ನಿರ್ದೇಶಕರಾಗಿ ಸುರೇಶ್ಚಂದ್ರ, ವಿವಿಧ ಹುದ್ದೆಗಳಲ್ಲಿ ಬ್ರಾಹ್ಮಣ ಸಮುದಾಯದವರಿಗೆ ಅಧಿಕಾರ ನೀಡಲಾಗಿದೆ’ ಎಂದರು.