‘ರಾಜ್ಯದಲ್ಲಿ ಡ್ರಗ್ ಪ್ರಕರಣ ಹೊಸದಲ್ಲ. ಆದರೆ, ತನಿಖೆಯನ್ನು ಇಷ್ಟು ಗಂಭೀರವಾಗಿ ಪರಿಗಣಿಸಿರುವುದು ಇದೇ ಮೊದಲು. ತನಿಖೆ ಎಳೆ ಯಾರ್ಯಾರ ಮನೆ ಬಾಗಿಲಿಗೆ ಒಯ್ಯುತ್ತದೋ ಗೊತ್ತಿಲ್ಲ. ತನಿಖಾಧಿಕಾರಿಗಳ ಮೇಲೆ ಒತ್ತಡ ತರುತ್ತಿದ್ದಾರೆಂದು ಮಾರ್ಮಿಕವಾಗಿ ಹೇಳಿದ್ದೇನೆ. ನಮ್ಮ ಮೇಲೆ ಒತ್ತಡ ತರುತ್ತಿದ್ದಾರೆ ಎಂದು ಹೇಳಿಲ್ಲ. ಯಾರು ಮಾತು ಕೇಳುತ್ತಾರೆ ಅನಿಸುತ್ತೋ ಅವರ ಮೇಲೆ ಒತ್ತಡ ತರುತ್ತಾರೆ. ನಮ್ಮ ಸರ್ಕಾರ ಒತ್ತಡಕ್ಕೆ ಮಣಿಯಲ್ಲ’ ಎಂದು ಉತ್ತರಿಸಿದರು.