<p><strong>ಚಿಕ್ಕಮಗಳೂರು:</strong> ‘ನಟಿ ರಾಗಿಣಿ ದ್ವಿವೇದಿಗೆ ಬಿಜೆಪಿಯಲ್ಲಿ ನೇರವಾಗಿ ಯಾವುದೇ ಜವಾಬ್ದಾರಿ ಇಲ್ಲ. ಪಕ್ಷಕ್ಕೂ ಅವರಿಗೂ ಸಂಬಂಧ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಗಿಣಿ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ತಪ್ಪು ಯಾರೇ ಮಾಡಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇವೆ ಎಂಬುದಕ್ಕೆ ತನಿಖೆ ಧಾಟಿಯೇ ಸಾಕ್ಷಿ. ರಾಜಿ ಮಾಡಿಕೊಂಡು ಅವರ ಜತೆಯೇ ಅಡ್ಜಸ್ಟ್ಮೆಂಟ್ ಮಾಡಿಕೊಂಡು ರಾಜಕಾರಣ ಮಾಡಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು’ ಎಂದರು.</p>.<p>‘ರಾಜ್ಯದಲ್ಲಿ ಡ್ರಗ್ ಪ್ರಕರಣ ಹೊಸದಲ್ಲ. ಆದರೆ, ತನಿಖೆಯನ್ನು ಇಷ್ಟು ಗಂಭೀರವಾಗಿ ಪರಿಗಣಿಸಿರುವುದು ಇದೇ ಮೊದಲು. ತನಿಖೆ ಎಳೆ ಯಾರ್ಯಾರ ಮನೆ ಬಾಗಿಲಿಗೆ ಒಯ್ಯುತ್ತದೋ ಗೊತ್ತಿಲ್ಲ. ತನಿಖಾಧಿಕಾರಿಗಳ ಮೇಲೆ ಒತ್ತಡ ತರುತ್ತಿದ್ದಾರೆಂದು ಮಾರ್ಮಿಕವಾಗಿ ಹೇಳಿದ್ದೇನೆ. ನಮ್ಮ ಮೇಲೆ ಒತ್ತಡ ತರುತ್ತಿದ್ದಾರೆ ಎಂದು ಹೇಳಿಲ್ಲ. ಯಾರು ಮಾತು ಕೇಳುತ್ತಾರೆ ಅನಿಸುತ್ತೋ ಅವರ ಮೇಲೆ ಒತ್ತಡ ತರುತ್ತಾರೆ. ನಮ್ಮ ಸರ್ಕಾರ ಒತ್ತಡಕ್ಕೆ ಮಣಿಯಲ್ಲ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ‘ನಟಿ ರಾಗಿಣಿ ದ್ವಿವೇದಿಗೆ ಬಿಜೆಪಿಯಲ್ಲಿ ನೇರವಾಗಿ ಯಾವುದೇ ಜವಾಬ್ದಾರಿ ಇಲ್ಲ. ಪಕ್ಷಕ್ಕೂ ಅವರಿಗೂ ಸಂಬಂಧ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಗಿಣಿ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ತಪ್ಪು ಯಾರೇ ಮಾಡಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇವೆ ಎಂಬುದಕ್ಕೆ ತನಿಖೆ ಧಾಟಿಯೇ ಸಾಕ್ಷಿ. ರಾಜಿ ಮಾಡಿಕೊಂಡು ಅವರ ಜತೆಯೇ ಅಡ್ಜಸ್ಟ್ಮೆಂಟ್ ಮಾಡಿಕೊಂಡು ರಾಜಕಾರಣ ಮಾಡಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು’ ಎಂದರು.</p>.<p>‘ರಾಜ್ಯದಲ್ಲಿ ಡ್ರಗ್ ಪ್ರಕರಣ ಹೊಸದಲ್ಲ. ಆದರೆ, ತನಿಖೆಯನ್ನು ಇಷ್ಟು ಗಂಭೀರವಾಗಿ ಪರಿಗಣಿಸಿರುವುದು ಇದೇ ಮೊದಲು. ತನಿಖೆ ಎಳೆ ಯಾರ್ಯಾರ ಮನೆ ಬಾಗಿಲಿಗೆ ಒಯ್ಯುತ್ತದೋ ಗೊತ್ತಿಲ್ಲ. ತನಿಖಾಧಿಕಾರಿಗಳ ಮೇಲೆ ಒತ್ತಡ ತರುತ್ತಿದ್ದಾರೆಂದು ಮಾರ್ಮಿಕವಾಗಿ ಹೇಳಿದ್ದೇನೆ. ನಮ್ಮ ಮೇಲೆ ಒತ್ತಡ ತರುತ್ತಿದ್ದಾರೆ ಎಂದು ಹೇಳಿಲ್ಲ. ಯಾರು ಮಾತು ಕೇಳುತ್ತಾರೆ ಅನಿಸುತ್ತೋ ಅವರ ಮೇಲೆ ಒತ್ತಡ ತರುತ್ತಾರೆ. ನಮ್ಮ ಸರ್ಕಾರ ಒತ್ತಡಕ್ಕೆ ಮಣಿಯಲ್ಲ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>