ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್‌ ಜೋಡೊ ಯಾತ್ರೆಯಲ್ಲ, ಕಾಂಗ್ರೆಸ್ ತೋಡೊ ಯಾತ್ರೆ: ಈಶ್ವರಪ್ಪ ವ್ಯಂಗ್ಯ

Last Updated 27 ಸೆಪ್ಟೆಂಬರ್ 2022, 14:30 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಭಾರತ್‌ ಜೋಡೊ ಯಾತ್ರೆಯು ಕಾಂಗ್ರೆಸ್ ತೊಡೊ ಯಾತ್ರೆ ಆಗುತ್ತಿದೆ. ಯಾತ್ರೆ ಶುರುವಾದ ದಿನದಿಂದ ಆ ಪಕ್ಷ ಕುಗ್ಗುತ್ತಿದೆ’ ಎಂದು ಬಿಜೆಪಿ ಶಾಸಕ ಕೆ.ಎಸ್‌.ಈಶ್ವರಪ್ಪ ಟೀಕಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ರಾಜಸ್ಥಾನ ಮುಖ್ಯಮಂತ್ರಿ ಕೈಕೊಟ್ಟಿದ್ದಾರೆ, 95 ಶಾಸಕರು ಕಾಂಗ್ರೆಸ್‌ ತೊರೆದಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷರು ಯಾರಾಗಬೇಕು ಎಂಬ ನಿಟ್ಟಿನಲ್ಲೂ ಗುಂಪುಗಾರಿಕೆ ಬೆಳೆಯುತ್ತಿದೆ’ ಎಂದು ಲೇವಡಿ ಮಾಡಿದರು.

‘ರಾಜ್ಯದಲ್ಲಿ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್‌ ಪೇ–ಸಿಎಂ ಷಡ್ಯಂತ್ರದಲ್ಲಿ ತೊಡಗಿದೆ. ಆ ತಂತ್ರ ಫಲಿಸಲ್ಲ’ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT