ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವೀಣ್‌ ಹತ್ಯೆ: ಬಿಜೆಪಿ ಯುವ ಪದಾಧಿಕಾರಿಗಳು, 9 ಮಂಡಲ ಅಧ್ಯಕ್ಷರ ರಾಜೀನಾಮೆ

Last Updated 27 ಜುಲೈ 2022, 11:22 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಪ್ರವೀಣ್‌ ನೆಟ್ಟಾರು ಹಂತಕರನ್ನು, ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ, ಜಿಲ್ಲೆಯ 9 ಮಂಡಲಗಳ ಅಧ್ಯಕ್ಷರು ಬುಧವಾರ ರಾಜೀನಾಮೆ ನೀಡಿದ್ದಾರೆ.

ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್‌ ಹರಿವಿನಗಂಡಿ ಸಹಿತ ಎಲ್ಲ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರವೀಣ್‌ ಸಾವು ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟ. ರಾತ್ರಿ ಸಮಯದಲ್ಲಿ ಹಿಂದಿನಿಂದ ಬಂದು ಹೊಡೆದಿರುವುದು ಹೇಡಿಗಳ ಕೃತ್ಯವಾಗಿದೆ. ಬಿಜೆಪಿ ಯುವ ಮೋರ್ಚಾದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದ ಹುಡುಗ ಸಮಾಜಕ್ಕಾಗಿ ಪ್ರಾಣ ತೆತ್ತಿರುವುದು ದುರ್ದೈವದ ಸಂಗತಿ. ಆರೋಪಿಗಳನ್ನು ಬಂಧಿಸಿ ಉಗ್ರ ಶಿಕ್ಷೆ ವಿಧಿಸಬೇಕು. ಮುಂದೆ ಇಂಥ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು.

ಹಿಂದೆ ನಡೆದ ಕೊಲೆಗಳಿಗೆ ಯಾವ ರೀತಿ ನ್ಯಾಯ ಸಿಕ್ಕಿದೆ ಎನ್ನುವುದು ನಮ್ಮ ಕಣ್ಣ ಮುಂದಿದೆ. ಕಠಿಣ ಕ್ರಮ ಎನ್ನುವುದು ಭರವಸೆಯಾಗೇ ಉಳಿದಿದೆ. ಹೀಗಾಗಿ ಜಿಲ್ಲಾ ಯುವ ಮೋರ್ಚಾ ಎಲ್ಲ ಪದಾಧಿಕಾರಿಗಳು, 9 ಮಂಡಲಗಳ ಅಧ್ಯಕ್ಷರು ಪಕ್ಷದ ಜವಾಬ್ದಾರಿಗೆ ರಾಜೀನಾಮೆ ನೀಡಿದ್ದೇವೆ ಎಂದು ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್‌ ಹರಿವಿನಗಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT