<p><strong>ಚಿಕ್ಕಮಗಳೂರು</strong>: ಕಡೂರು ತಾಲ್ಲೂಕಿನ ಕಲ್ಲೇನಹಳ್ಳಿ ಗ್ರಾಮದ ಬಳಿ ಗುಂಡಿನ ದಾಳಿಗೆ ಮೂರು ಕೃಷ್ಣಮೃಗಗಳು ಮೃತಪಟ್ಟಿವೆ.</p>.<p>ಬಾಸೂರು ಅಮೃತ ಮಹಲ್ ಕಾವಲಿನ ಕೃಷ್ಣಮೃಗ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಖಾಸಗಿ ಕೃಷಿ ಭೂಮಿಯಲ್ಲಿ ಮೂರು ಕೃಷ್ಣಮೃಗಗಳ ಕಳೇಬರ ಮಂಗಳವಾರ ಪತ್ತೆಯಾಗಿವೆ.</p>.<p>ಎರಡು ಹೆಣ್ಣು ಮತ್ತು ಒಂದು ಗಂಡು ಕೃಷ್ಣಮೃಗವಾಗಿದ್ದು, ಒಂದೂವರೆ ವರ್ಷದಿಂದ ಎರಡು ವರ್ಷದೊಳಗಿನ ವಯಸ್ಸಿನವು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.</p>.<p>ಕಳೇಬರ ಇರುವ ಮಾಹಿತಿಯನ್ನು ಸ್ಥಳೀಯರು ನೀಡಿದ ಕೂಡಲೇ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು, ಪರಿಶೀಲಿಸಿದರು. ಗುಂಡು ಹಾರಿಸಿರುವ ಹಾಗೂ ವಾಹನಗಳ ಸಂಚರಿಸಿರುವ ಗುರುತುಗಳು ಸ್ಥಳದಲ್ಲಿ ಪತ್ತೆಯಾಗಿವೆ. </p>.<p>ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಹೆಚ್ಚಿನ ಪರೀಕ್ಷೆಗಳಿಗೆ ಮಾದರಿ ಸಂಗ್ರಹಿಸಲಾಗಿದೆ. ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ ಎಂದು ಉಪಅರಣ್ಯ ಸಂರಕ್ಷಣಾಧಿಕಾರಿ ರಮೇಶ್ಬಾಬು ತಿಳಿಸಿದರು.</p>.<p>ಬೇಟೆಗಾರರ ಗುಂಡಿಗೆ ಕೃಷ್ಣಮೃಗಗಳು ಬಲಿಯಾಗಿರಬಹುದು. ಗುಂಪಿನಲ್ಲಿ ದೊಡ್ಡವುಗಳನ್ನು ಒಯ್ದು ಮರಿಗಳನ್ನು ಇಲ್ಲಿಯೇ ಬಿಟ್ಟು ಹೋಗಿರಬಹುದು. ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಪರಿಸರವಾದಿಗಳು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಕಡೂರು ತಾಲ್ಲೂಕಿನ ಕಲ್ಲೇನಹಳ್ಳಿ ಗ್ರಾಮದ ಬಳಿ ಗುಂಡಿನ ದಾಳಿಗೆ ಮೂರು ಕೃಷ್ಣಮೃಗಗಳು ಮೃತಪಟ್ಟಿವೆ.</p>.<p>ಬಾಸೂರು ಅಮೃತ ಮಹಲ್ ಕಾವಲಿನ ಕೃಷ್ಣಮೃಗ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಖಾಸಗಿ ಕೃಷಿ ಭೂಮಿಯಲ್ಲಿ ಮೂರು ಕೃಷ್ಣಮೃಗಗಳ ಕಳೇಬರ ಮಂಗಳವಾರ ಪತ್ತೆಯಾಗಿವೆ.</p>.<p>ಎರಡು ಹೆಣ್ಣು ಮತ್ತು ಒಂದು ಗಂಡು ಕೃಷ್ಣಮೃಗವಾಗಿದ್ದು, ಒಂದೂವರೆ ವರ್ಷದಿಂದ ಎರಡು ವರ್ಷದೊಳಗಿನ ವಯಸ್ಸಿನವು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.</p>.<p>ಕಳೇಬರ ಇರುವ ಮಾಹಿತಿಯನ್ನು ಸ್ಥಳೀಯರು ನೀಡಿದ ಕೂಡಲೇ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು, ಪರಿಶೀಲಿಸಿದರು. ಗುಂಡು ಹಾರಿಸಿರುವ ಹಾಗೂ ವಾಹನಗಳ ಸಂಚರಿಸಿರುವ ಗುರುತುಗಳು ಸ್ಥಳದಲ್ಲಿ ಪತ್ತೆಯಾಗಿವೆ. </p>.<p>ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಹೆಚ್ಚಿನ ಪರೀಕ್ಷೆಗಳಿಗೆ ಮಾದರಿ ಸಂಗ್ರಹಿಸಲಾಗಿದೆ. ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ ಎಂದು ಉಪಅರಣ್ಯ ಸಂರಕ್ಷಣಾಧಿಕಾರಿ ರಮೇಶ್ಬಾಬು ತಿಳಿಸಿದರು.</p>.<p>ಬೇಟೆಗಾರರ ಗುಂಡಿಗೆ ಕೃಷ್ಣಮೃಗಗಳು ಬಲಿಯಾಗಿರಬಹುದು. ಗುಂಪಿನಲ್ಲಿ ದೊಡ್ಡವುಗಳನ್ನು ಒಯ್ದು ಮರಿಗಳನ್ನು ಇಲ್ಲಿಯೇ ಬಿಟ್ಟು ಹೋಗಿರಬಹುದು. ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಪರಿಸರವಾದಿಗಳು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>