<p><strong>ತರೀಕೆರೆ:</strong> ರಕ್ತದೊತ್ತಡವನ್ನು ಸರಿಯಾದ ರೀತಿಯಲ್ಲಿ ಪರೀಕ್ಷೆ ಮಾಡಿಸಿಕೊಂಡು, ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ದೇವರಾಜ್ ಹೇಳಿದರು.</p>.<p>ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ‘ವಿಶ್ವ ಅಧಿಕ ರಕ್ತದೊತ್ತಡ ದಿನ’ದಲ್ಲಿ ಅವರು ಮಾತನಾಡಿದರು.</p>.<p>ಹಿರಿಯ ನಾಗರಿಕರೇ ಇಂಥ ಸಮಸ್ಯೆಯಿಂದ ಹೆಚ್ಚಾಗಿ ಬಳಲುತ್ತಿದ್ದು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ರಕ್ತದೊತ್ತಡ ಮತ್ತು ಮಧುಮೇಹಕ್ಕೆ ಔಷಧಿಗಳು ಲಭ್ಯವಿರುತ್ತವೆ. ಅವಶ್ಯಕತೆ ಇರುವ ರೋಗಿಗಳು ಉಚಿತವಾಗಿ ಇಸಿಜಿ, ಬಿ.ಪಿ, ಸಕ್ಕರೆ ಕಾಯಿಲೆ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ, ಔಷಧಿ ಪಡೆದುಕೊಳ್ಳಬೇಕು ಎಂದರು.</p>.<p>ಅಧಿಕ ರಕ್ತದ ಒತ್ತಡದಿಂದ ಮಿದುಳಿಗೆ ರಕ್ತಸ್ರಾವವಾಗಿ ಪಾರ್ಶ್ವವಾಯು ಆಗುವ ಸಂಭವ, ಕಿಡ್ನಿಗಳ ಮೇಲೆ ಆಗಬಹುದಾದ ತೊಂದರೆಗಳನ್ನು ವಿವರಿಸಿದರು. ಸದ್ಯದಲ್ಲೇ ಬಿ.ಪಿ ಮತ್ತು ಮಧುಮೇಹಕ್ಕೆ ಸಂಬಂಧಿಸಿದ ಮಾತ್ರೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡಲಿದ್ದು, ಅದುವರೆಗೂ ಆಸ್ಪತ್ರೆಯಲ್ಲಿ ಔಷಧಿಗಳು ಲಭ್ಯವಿರುತ್ತವೆ ಎಂದರು.</p>.<p>ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಚಿಕಿತ್ಸೆ ನೀಡುವ ಜೊತೆಗೆ ರೋಗ ಬರುವುದನ್ನು ತಡೆಗಟ್ಟುವ ಕಾರ್ಯಕ್ರಮಗಳನ್ನೂ ನಡೆಸುತ್ತಿವೆ ಎಂದರು.</p>.<p>ಓಂಕಾರ್ ಮೂರ್ತಿ ಸ್ವಾಗತಿಸಿದರು. ಡಾ.ಶ್ರೀನಿವಾಸ್ ವಂದಿಸಿದರು. ಆಸ್ಪತ್ರೆಯ ತಜ್ಞ ವೈದ್ಯರು, ಸಿಬ್ಬಂದಿ, ತಾಲ್ಲೂಕು ಆರೋಗ್ಯ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ:</strong> ರಕ್ತದೊತ್ತಡವನ್ನು ಸರಿಯಾದ ರೀತಿಯಲ್ಲಿ ಪರೀಕ್ಷೆ ಮಾಡಿಸಿಕೊಂಡು, ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ದೇವರಾಜ್ ಹೇಳಿದರು.</p>.<p>ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ‘ವಿಶ್ವ ಅಧಿಕ ರಕ್ತದೊತ್ತಡ ದಿನ’ದಲ್ಲಿ ಅವರು ಮಾತನಾಡಿದರು.</p>.<p>ಹಿರಿಯ ನಾಗರಿಕರೇ ಇಂಥ ಸಮಸ್ಯೆಯಿಂದ ಹೆಚ್ಚಾಗಿ ಬಳಲುತ್ತಿದ್ದು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ರಕ್ತದೊತ್ತಡ ಮತ್ತು ಮಧುಮೇಹಕ್ಕೆ ಔಷಧಿಗಳು ಲಭ್ಯವಿರುತ್ತವೆ. ಅವಶ್ಯಕತೆ ಇರುವ ರೋಗಿಗಳು ಉಚಿತವಾಗಿ ಇಸಿಜಿ, ಬಿ.ಪಿ, ಸಕ್ಕರೆ ಕಾಯಿಲೆ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ, ಔಷಧಿ ಪಡೆದುಕೊಳ್ಳಬೇಕು ಎಂದರು.</p>.<p>ಅಧಿಕ ರಕ್ತದ ಒತ್ತಡದಿಂದ ಮಿದುಳಿಗೆ ರಕ್ತಸ್ರಾವವಾಗಿ ಪಾರ್ಶ್ವವಾಯು ಆಗುವ ಸಂಭವ, ಕಿಡ್ನಿಗಳ ಮೇಲೆ ಆಗಬಹುದಾದ ತೊಂದರೆಗಳನ್ನು ವಿವರಿಸಿದರು. ಸದ್ಯದಲ್ಲೇ ಬಿ.ಪಿ ಮತ್ತು ಮಧುಮೇಹಕ್ಕೆ ಸಂಬಂಧಿಸಿದ ಮಾತ್ರೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡಲಿದ್ದು, ಅದುವರೆಗೂ ಆಸ್ಪತ್ರೆಯಲ್ಲಿ ಔಷಧಿಗಳು ಲಭ್ಯವಿರುತ್ತವೆ ಎಂದರು.</p>.<p>ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಚಿಕಿತ್ಸೆ ನೀಡುವ ಜೊತೆಗೆ ರೋಗ ಬರುವುದನ್ನು ತಡೆಗಟ್ಟುವ ಕಾರ್ಯಕ್ರಮಗಳನ್ನೂ ನಡೆಸುತ್ತಿವೆ ಎಂದರು.</p>.<p>ಓಂಕಾರ್ ಮೂರ್ತಿ ಸ್ವಾಗತಿಸಿದರು. ಡಾ.ಶ್ರೀನಿವಾಸ್ ವಂದಿಸಿದರು. ಆಸ್ಪತ್ರೆಯ ತಜ್ಞ ವೈದ್ಯರು, ಸಿಬ್ಬಂದಿ, ತಾಲ್ಲೂಕು ಆರೋಗ್ಯ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>