<p><strong>ಚಿಕ್ಕಮಗಳೂರು</strong>: ಜಿಲ್ಲೆಯಲ್ಲಿ 12 ಸಾವಿರಕ್ಕೂ ಹೆಚ್ಚು ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಆಹಾರ ಇಲಾಖೆ ಗುರುತಿಸಿದ್ದು, ಅವುಗಳ ಮರು ಪರಿಶೀಲನೆಗೆ ಮುಂದಾಗಿದೆ.</p>.<p>ಜಿಲ್ಲೆಯಲ್ಲಿ ಒಟ್ಟು 2.59 ಲಕ್ಷ ಪಡಿತರ ಚೀಟಿಗಳಿದ್ದು, ಇದರಲ್ಲಿ 2.37 ಲಕ್ಷ ಬಿಪಿಎಲ್ ಕಾರ್ಡ್ಗಳಿವೆ. ಈ ಪೈಕಿ 12,993 ಕಾರ್ಡ್ಗಳನ್ನು ಅನರ್ಹ ಎಂದು ಅನುಮಾನಿಸಿ ಆಹಾರ ಇಲಾಖೆ ಪಟ್ಟಿ ಮಾಡಿದೆ.</p>.<p>ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಜಿಎಸ್ಟಿ ನೋಂದಣಿ ಮಾಡಿಸಿದವರು, ಆದಾಯ ತೆರಿಗೆ ಪಾವತಿದಾರರು, ವಾರ್ಷಿಕ ₹1.20 ಲಕ್ಷಕ್ಕೂ ಅಧಿಕ ವರಮಾನ ಹೊಂದಿರುವ ಕುಟುಂಬಗಳೇ 11 ಸಾವಿರಕ್ಕೂಹೆಚ್ಚಿವೆ. 3 ಹೆಕ್ಟೇರ್ಗೂ ಅಧಿಕ ಕೃಷಿ ಭೂಮಿ ಹೊಂದಿದವರು, ಪಡಿತರ ಪಡೆಯದಿರುವ ಕುಟುಂಬಗಳು ಸಂಖ್ಯೆ 1 ಸಾವಿರಕ್ಕೂ ಅಧಿಕ ಇದೆ.</p>.<p>353 ಕುಟುಂಬಗಳು ಆರು ತಿಂಗಳಿಂದ ಪಡಿತರ ಪಡೆದಿಲ್ಲ. 114 ಕುಟುಂಬಗಳು 12 ತಿಂಗಳಿಂದ ಪಡಿತರ ಪಡೆದಿಲ್ಲ. 183 ಕುಟುಂಬಗಳು 3 ಹೆಕ್ಟೇರ್ಗೂ ಅಧಿಕ ಭೂಮಿ ಹೊಂದಿವೆ. ಬಿಪಿಎಲ್ ಪಡಿತರ ಚೀಟಿ ಹೊಂದಲು ಈ ಕುಟುಂಬಗಳು ಅರ್ಹರಲ್ಲ ಎಂದು ಗುರುತಿಸಿ ಪಟ್ಟಿ ಮಾಡಲಾಗಿದೆ.</p>.<p>ಅಂತಹ ಕಾರ್ಡುದಾರರಿಗೆ ನೋಟಿಸ್ ನೀಡುವ ಕಾರ್ಯವನ್ನು ಆರಂಭಿಸಿತ್ತು. ಆದರೆ, ಸರ್ಕಾರದ ನಿರ್ದೇಶನದಂತೆ ನೋಟಿಸ್ ನೀಡುವ ಕಾರ್ಯವನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ. ಮರುಪರಿಶೀಲನೆ ಕಾರ್ಯ ಆರಂಭವಾಗಿದೆ.</p>.<p>ಮರುಪರಿಶೀಲನೆ ವೇಳೆ ಅನರ್ಹರು ಎಂದು ದೃಢಪಟ್ಟರೆ ಅಂತಹ ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ ಕಾರ್ಡ್ ಆಗಿ ಪರಿವರ್ತಿಸಲಾಗುವುದು. ಯಾವುದೇ ಕಾರ್ಡ್ಗಳನ್ನೂ ರದ್ದುಗೊಳಿಸುವುದಿಲ್ಲ ಎಂದು ಆಹಾರ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಜಿಲ್ಲೆಯಲ್ಲಿ 12 ಸಾವಿರಕ್ಕೂ ಹೆಚ್ಚು ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಆಹಾರ ಇಲಾಖೆ ಗುರುತಿಸಿದ್ದು, ಅವುಗಳ ಮರು ಪರಿಶೀಲನೆಗೆ ಮುಂದಾಗಿದೆ.</p>.<p>ಜಿಲ್ಲೆಯಲ್ಲಿ ಒಟ್ಟು 2.59 ಲಕ್ಷ ಪಡಿತರ ಚೀಟಿಗಳಿದ್ದು, ಇದರಲ್ಲಿ 2.37 ಲಕ್ಷ ಬಿಪಿಎಲ್ ಕಾರ್ಡ್ಗಳಿವೆ. ಈ ಪೈಕಿ 12,993 ಕಾರ್ಡ್ಗಳನ್ನು ಅನರ್ಹ ಎಂದು ಅನುಮಾನಿಸಿ ಆಹಾರ ಇಲಾಖೆ ಪಟ್ಟಿ ಮಾಡಿದೆ.</p>.<p>ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಜಿಎಸ್ಟಿ ನೋಂದಣಿ ಮಾಡಿಸಿದವರು, ಆದಾಯ ತೆರಿಗೆ ಪಾವತಿದಾರರು, ವಾರ್ಷಿಕ ₹1.20 ಲಕ್ಷಕ್ಕೂ ಅಧಿಕ ವರಮಾನ ಹೊಂದಿರುವ ಕುಟುಂಬಗಳೇ 11 ಸಾವಿರಕ್ಕೂಹೆಚ್ಚಿವೆ. 3 ಹೆಕ್ಟೇರ್ಗೂ ಅಧಿಕ ಕೃಷಿ ಭೂಮಿ ಹೊಂದಿದವರು, ಪಡಿತರ ಪಡೆಯದಿರುವ ಕುಟುಂಬಗಳು ಸಂಖ್ಯೆ 1 ಸಾವಿರಕ್ಕೂ ಅಧಿಕ ಇದೆ.</p>.<p>353 ಕುಟುಂಬಗಳು ಆರು ತಿಂಗಳಿಂದ ಪಡಿತರ ಪಡೆದಿಲ್ಲ. 114 ಕುಟುಂಬಗಳು 12 ತಿಂಗಳಿಂದ ಪಡಿತರ ಪಡೆದಿಲ್ಲ. 183 ಕುಟುಂಬಗಳು 3 ಹೆಕ್ಟೇರ್ಗೂ ಅಧಿಕ ಭೂಮಿ ಹೊಂದಿವೆ. ಬಿಪಿಎಲ್ ಪಡಿತರ ಚೀಟಿ ಹೊಂದಲು ಈ ಕುಟುಂಬಗಳು ಅರ್ಹರಲ್ಲ ಎಂದು ಗುರುತಿಸಿ ಪಟ್ಟಿ ಮಾಡಲಾಗಿದೆ.</p>.<p>ಅಂತಹ ಕಾರ್ಡುದಾರರಿಗೆ ನೋಟಿಸ್ ನೀಡುವ ಕಾರ್ಯವನ್ನು ಆರಂಭಿಸಿತ್ತು. ಆದರೆ, ಸರ್ಕಾರದ ನಿರ್ದೇಶನದಂತೆ ನೋಟಿಸ್ ನೀಡುವ ಕಾರ್ಯವನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ. ಮರುಪರಿಶೀಲನೆ ಕಾರ್ಯ ಆರಂಭವಾಗಿದೆ.</p>.<p>ಮರುಪರಿಶೀಲನೆ ವೇಳೆ ಅನರ್ಹರು ಎಂದು ದೃಢಪಟ್ಟರೆ ಅಂತಹ ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ ಕಾರ್ಡ್ ಆಗಿ ಪರಿವರ್ತಿಸಲಾಗುವುದು. ಯಾವುದೇ ಕಾರ್ಡ್ಗಳನ್ನೂ ರದ್ದುಗೊಳಿಸುವುದಿಲ್ಲ ಎಂದು ಆಹಾರ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>