ತಾಲ್ಲೂಕಿನ ಕಾಳನಾಯಕನ ಕಟ್ಟೆಯಿಂದ ಗೌರಿಗದ್ದೆ ದತ್ತಾಶ್ರಮಕ್ಕೆ ಹೋಗುವ ರಸ್ತೆಯಲ್ಲಿ ₹ 75 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಯನ್ನುಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ‘ಕಾಳನಾಯಕನ ಕಟ್ಟೆಯಿಂದ ಗೌರಿಗದ್ದೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ್ದೇನೆ. ಕಾಳನಾಯಕನಕಟ್ಟೆ, ಗೌರಿಗದ್ದೆ, ಮೇಲ್ ಬಿಳ್ರೆ ರಸ್ತೆ ಅಭಿವೃದ್ಧಿಗೆ ಮಂಜೂ ರಾತಿ ನೀಡಲಾಗಿದ್ದು, ಕಾಮಗಾರಿ ನಡೆಯಲಿದೆ. ಲೋಕೋಪಯೋಗಿ ಇಲಾಖೆ ಕಡೆಯಿಂದ ಅನೇಕ ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ’ ಎಂದರು.