ನರಸಿಂಹರಾಜಪುರ: ಭದ್ರಾಹುಲಿ ಯೋಜನೆ, ಬಫರ್ ಝೋನ್, ಪರಿಸರ ಸೂಕ್ಷ್ಮ ವಲಯ, ಮೀಸಲು ಅರಣ್ಯ ಪ್ರಸ್ತಾವನೆ, ಕಸ್ತೂರಿರಂಗನ್ ವರದಿ ವಿರುದ್ಧ ಹಾಗೂ ಪಾರಂಪರಿಕ ಅರಣ್ಯ ನಿವಾಸಿಗಳ ಹಕ್ಕೋತ್ತಾಯಿಸಿ ಮಲೆನಾಡು ರೈತ ಹಿತರಕ್ಷಣಾ ಸಮಿತಿ ಕರೆ ನೀಡಲಾಗಿದ್ದ ಸ್ವಯಂ ಪ್ರೇರಿತ ನರಸಿಂಹರಾಜಪುರ ತಾಲ್ಲೂಕು ಬಂದ್ ಸಂಪೂರ್ಣ ಯಶಸ್ವಿಯಾಯಿತು.