<p><strong>ನರಸಿಂಹರಾಜಪುರ</strong>: ಸಿಂಹನಗದ್ದೆ ಬಸ್ತೊ ಮಠದ ಶ್ರೀ ಜ್ವಾಲಾಮಾಲಿನಿ ಎಜುಕೇಷನ್ ಸೊಸೈಟಿ ನಡೆಸುತ್ತಿರುವ ಜ್ವಾಲಾಮಾಲಿನಿ ದೇವಿ ಆಂಗ್ಲ ಮಾಧ್ಯಮ ಶಾಲೆಗೆ ಕರ್ಣಾಟಕ ಬ್ಯಾಂಕ್ ಸಿಎಸ್ಆರ್ ಯೋಜನೆಯಡಿ ₹ 21,84,500 ಮೌಲ್ಯದ ಬಸ್ ಕೊಡುಗೆಯಾಗಿ ನೀಡಿದೆ.</p>.<p>ಸೊಸೈಟಿ ಹಾಗೂ ಭಗವಾನ್ ಶ್ರೀ 1008 ಚಂದ್ರಪ್ರಭ ಚಾರಿಟಬಲ್ ಟ್ರಸ್ಟ್ ಗೌರವಾಧ್ಯಕ್ಷ ಲಕ್ಷ್ಮಿಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಅವರಿಗೆ ಕರ್ಣಾಟಕ ಬ್ಯಾಂಕ್ ಪ್ರಾದೇಶಿಕ ನಿರ್ದೇಶಕ ಹಯವದನ ಉಪಾಧ್ಯ ಹಾಗೂ ನರಸಿಂಹರಾಜಪುರ ಶಾಖಾ ವ್ಯವಸ್ಥಾಪಕ ಸುದರ್ಶನ್ ಅವರು ಬಸ್ನ ಕೀ ಹಸ್ತಾಂತರಿಸಿದರು.</p>.<p>ಲಕ್ಷ್ಮಿಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಮಾತನಾಡಿ, ಬಸ್ ಕೊಡುಗೆ ನೀಡುವ ಮೂಲಕ ಮಲೆನಾಡು ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಕರ್ಣಾಟಕ ಬ್ಯಾಂಕ್ ಅನುಕೂಲ ಮಾಡಿಕೊಟ್ಟಿದೆ ಎಂದರು.</p>.<p>ಹಯವದನ ಉಪಾಧ್ಯ, ಬ್ಯಾಂಕ್ ಆರ್ಥಿಕ ಚಟುವಟಿಕೆಗೆ ಮಾತ್ರ ಸೀಮಿತವಾಗಿರದೆ ಸಮಾಜ ಸೇವೆ ಮಾಡುತ್ತ ಶೈಕ್ಷಣಿಕ, ಆರೋಗ್ಯ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕೃಷಿ ವಲಯಕ್ಕೂ ಸಹಾಯ ಮಾಡುತ್ತಿದೆ ಎಂದರು.</p>.<p>ಜ್ವಾಲಾಮಾಲಿನಿ ಬಾಲಿಕಾ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಜಿನರಾಜೇಂದ್ರ, ಶಿಕ್ಷಕರಾದ ಗಣಪತಿ ತಂತ್ರಿ, ಗುಣಪಾಲ್ ಜೈನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ</strong>: ಸಿಂಹನಗದ್ದೆ ಬಸ್ತೊ ಮಠದ ಶ್ರೀ ಜ್ವಾಲಾಮಾಲಿನಿ ಎಜುಕೇಷನ್ ಸೊಸೈಟಿ ನಡೆಸುತ್ತಿರುವ ಜ್ವಾಲಾಮಾಲಿನಿ ದೇವಿ ಆಂಗ್ಲ ಮಾಧ್ಯಮ ಶಾಲೆಗೆ ಕರ್ಣಾಟಕ ಬ್ಯಾಂಕ್ ಸಿಎಸ್ಆರ್ ಯೋಜನೆಯಡಿ ₹ 21,84,500 ಮೌಲ್ಯದ ಬಸ್ ಕೊಡುಗೆಯಾಗಿ ನೀಡಿದೆ.</p>.<p>ಸೊಸೈಟಿ ಹಾಗೂ ಭಗವಾನ್ ಶ್ರೀ 1008 ಚಂದ್ರಪ್ರಭ ಚಾರಿಟಬಲ್ ಟ್ರಸ್ಟ್ ಗೌರವಾಧ್ಯಕ್ಷ ಲಕ್ಷ್ಮಿಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಅವರಿಗೆ ಕರ್ಣಾಟಕ ಬ್ಯಾಂಕ್ ಪ್ರಾದೇಶಿಕ ನಿರ್ದೇಶಕ ಹಯವದನ ಉಪಾಧ್ಯ ಹಾಗೂ ನರಸಿಂಹರಾಜಪುರ ಶಾಖಾ ವ್ಯವಸ್ಥಾಪಕ ಸುದರ್ಶನ್ ಅವರು ಬಸ್ನ ಕೀ ಹಸ್ತಾಂತರಿಸಿದರು.</p>.<p>ಲಕ್ಷ್ಮಿಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಮಾತನಾಡಿ, ಬಸ್ ಕೊಡುಗೆ ನೀಡುವ ಮೂಲಕ ಮಲೆನಾಡು ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಕರ್ಣಾಟಕ ಬ್ಯಾಂಕ್ ಅನುಕೂಲ ಮಾಡಿಕೊಟ್ಟಿದೆ ಎಂದರು.</p>.<p>ಹಯವದನ ಉಪಾಧ್ಯ, ಬ್ಯಾಂಕ್ ಆರ್ಥಿಕ ಚಟುವಟಿಕೆಗೆ ಮಾತ್ರ ಸೀಮಿತವಾಗಿರದೆ ಸಮಾಜ ಸೇವೆ ಮಾಡುತ್ತ ಶೈಕ್ಷಣಿಕ, ಆರೋಗ್ಯ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕೃಷಿ ವಲಯಕ್ಕೂ ಸಹಾಯ ಮಾಡುತ್ತಿದೆ ಎಂದರು.</p>.<p>ಜ್ವಾಲಾಮಾಲಿನಿ ಬಾಲಿಕಾ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಜಿನರಾಜೇಂದ್ರ, ಶಿಕ್ಷಕರಾದ ಗಣಪತಿ ತಂತ್ರಿ, ಗುಣಪಾಲ್ ಜೈನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>