<p><strong>ಬೀರೂರು: </strong>ಫಲಾನುಭವಿಗಳು ಸುಲಭವಾಗಿ ಪಿಂಚಣಿ ಪಡೆಯಲು ಸರ್ಕಾರ ಆರಂಭಿಸಿದ ‘ಹಲೋ ಕಂದಾಯ ಸಚಿವರೇ’ ಸಹಾಯವಾಣಿ ಸದಾ ಕಾರ್ಯನಿರತವಾಗಿದ್ದು, ಜನ ನಿರಾಸೆ ಎದುರಿಸುತ್ತಿದ್ದಾರೆ.</p>.<p>ಸರ್ಕಾರದ ವಿವಿಧ ಪಿಂಚಣಿ ಯೋಜನೆಗಳ ಫಲಾನುಭವಿಗಳಾಗಲು ಜನರು ಕಚೇರಿಗೆ ಅಲೆಯಬೇಕಿಲ್ಲ ಎನ್ನುವ ಉದ್ದೇಶದಿಂದ ಸಾಮಾಜಿಕ ಭದ್ರತಾ ಯೋಜನೆಗಳನ್ನು ಕೇವಲ 72 ಗಂಟೆಯೊಳಗೆ ಫಲಾನುಭವಿಗಳಿಗೆ ನೀಡುವ ಉದ್ದೇಶದಿಂದ ಯೋಜನೆಯನ್ನು ಆರಂಭಿಸಲಾಗಿತ್ತು. ಆದರೆ, ಈ ಸಹಾಯವಾಣಿ ‘155245'ಗೆ ಎಷ್ಟು ಪ್ರಯತ್ನಿಸಿದರೂ ಸಂಪರ್ಕ ಸಾಧ್ಯವಾಗುತ್ತಿಲ್ಲ ಎನ್ನುವುದು ಫಲಾನುಭವಿಗಳ ಅಳಲು.</p>.<p>ಇಲ್ಲಿನ ಗಂಗಮ್ಮ ಮಾತನಾಡಿ, ‘ ಸಹಾಯವಾಣಿಗೆ ಕಳೆದ 15 ದಿನಗಳಿಂದ ಎಷ್ಟು ಬಾರಿ ಫೋನ್ ಮಾಡಿದರೂ ತಲುಪಲು ಸಾಧ್ಯವಾಗುತ್ತಿಲ್ಲ. ನಾಡ ಕಚೇರಿಗೆ ಬಂದು ಅರ್ಜಿ ಸಲ್ಲಿಸಬೇಕಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಬೀರೂರು ನಾಡಕಚೇರಿ ಉಪತಹಸೀಲ್ದಾರ್ ಬಿ.ವಿ.ರವಿಕುಮಾರ್ ಪ್ರತಿಕ್ರಿಯಿಸಿ, ‘ಇಡೀ ರಾಜ್ಯಕ್ಕೆ ಒಂದೇ ಸರ್ವರ್ ಇರುವುದರಿಂದ ಕಾರ್ಯ ನಿರತವಾಗಿದೆ ಎಂದು ಉತ್ತರ ಬರುತ್ತಿರಬಹುದು. ನಮ್ಮಲ್ಲಿ ಅರ್ಜಿ ಸಲ್ಲಿಸಲು ಬಂದ ಫಲಾನುಭವಿಗಳಿಂದ ಎಂದಿನಂತೆ ಅರ್ಜಿ ಸ್ವೀಕರಿಸಿ ಅರ್ಹರಿಗೆ ಮಂಜೂರಾತಿ ನೀಡಲಾಗುತ್ತಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀರೂರು: </strong>ಫಲಾನುಭವಿಗಳು ಸುಲಭವಾಗಿ ಪಿಂಚಣಿ ಪಡೆಯಲು ಸರ್ಕಾರ ಆರಂಭಿಸಿದ ‘ಹಲೋ ಕಂದಾಯ ಸಚಿವರೇ’ ಸಹಾಯವಾಣಿ ಸದಾ ಕಾರ್ಯನಿರತವಾಗಿದ್ದು, ಜನ ನಿರಾಸೆ ಎದುರಿಸುತ್ತಿದ್ದಾರೆ.</p>.<p>ಸರ್ಕಾರದ ವಿವಿಧ ಪಿಂಚಣಿ ಯೋಜನೆಗಳ ಫಲಾನುಭವಿಗಳಾಗಲು ಜನರು ಕಚೇರಿಗೆ ಅಲೆಯಬೇಕಿಲ್ಲ ಎನ್ನುವ ಉದ್ದೇಶದಿಂದ ಸಾಮಾಜಿಕ ಭದ್ರತಾ ಯೋಜನೆಗಳನ್ನು ಕೇವಲ 72 ಗಂಟೆಯೊಳಗೆ ಫಲಾನುಭವಿಗಳಿಗೆ ನೀಡುವ ಉದ್ದೇಶದಿಂದ ಯೋಜನೆಯನ್ನು ಆರಂಭಿಸಲಾಗಿತ್ತು. ಆದರೆ, ಈ ಸಹಾಯವಾಣಿ ‘155245'ಗೆ ಎಷ್ಟು ಪ್ರಯತ್ನಿಸಿದರೂ ಸಂಪರ್ಕ ಸಾಧ್ಯವಾಗುತ್ತಿಲ್ಲ ಎನ್ನುವುದು ಫಲಾನುಭವಿಗಳ ಅಳಲು.</p>.<p>ಇಲ್ಲಿನ ಗಂಗಮ್ಮ ಮಾತನಾಡಿ, ‘ ಸಹಾಯವಾಣಿಗೆ ಕಳೆದ 15 ದಿನಗಳಿಂದ ಎಷ್ಟು ಬಾರಿ ಫೋನ್ ಮಾಡಿದರೂ ತಲುಪಲು ಸಾಧ್ಯವಾಗುತ್ತಿಲ್ಲ. ನಾಡ ಕಚೇರಿಗೆ ಬಂದು ಅರ್ಜಿ ಸಲ್ಲಿಸಬೇಕಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಬೀರೂರು ನಾಡಕಚೇರಿ ಉಪತಹಸೀಲ್ದಾರ್ ಬಿ.ವಿ.ರವಿಕುಮಾರ್ ಪ್ರತಿಕ್ರಿಯಿಸಿ, ‘ಇಡೀ ರಾಜ್ಯಕ್ಕೆ ಒಂದೇ ಸರ್ವರ್ ಇರುವುದರಿಂದ ಕಾರ್ಯ ನಿರತವಾಗಿದೆ ಎಂದು ಉತ್ತರ ಬರುತ್ತಿರಬಹುದು. ನಮ್ಮಲ್ಲಿ ಅರ್ಜಿ ಸಲ್ಲಿಸಲು ಬಂದ ಫಲಾನುಭವಿಗಳಿಂದ ಎಂದಿನಂತೆ ಅರ್ಜಿ ಸ್ವೀಕರಿಸಿ ಅರ್ಹರಿಗೆ ಮಂಜೂರಾತಿ ನೀಡಲಾಗುತ್ತಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>