ಕೊಪ್ಪ: ತಾಲ್ಲೂಕಿನ ನಿಲುವಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ನಿರಂತರ ಕೆಲಸ ಒದಗಿಸುವ ನಿಟ್ಟಿನಲ್ಲಿ ‘ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತರಿ’ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಾರು ಗ್ರಾಮದಲ್ಲಿ ಮನೆಗಳಿಗೆ ಭೇಟಿ ನೀಡಿ ಕರಪತ್ರ ಹಂಚಲಾಯಿತು. ನರೇಗಾ ಯೋಜನೆಯಲ್ಲಿ ಹೆಚ್ಚಿಸಿರುವ ಕೂಲಿ ಮೊತ್ತ, ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ, ಸಹಾಯವಾಣಿ ಸಂಖ್ಯೆ ನೀಡಲಾಯಿತು.
ರೋಜ್ಗಾರ್ ಸಹಾಯಕಿ ಜ್ಯೋತಿ, ಕರ ವಸೂಲಿಗಾರ ಮಹೇಶ್, ಐಇಸಿ ಸಂಯೋಜಕಿ ಸುಮಲತಾ ಇದ್ದರು.