ತರೀಕೆರೆಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಕಾರು ರಸ್ತೆಯಲ್ಲಿ ಮಂಜುಮುಸುಕಿದ್ದರಿಂದ ದಾರಿ ಕಾಣದೇ ಚಾಲಕನ ನಿಯಂತ್ರಣ ತಪ್ಪಿ, ನೂರೈವತ್ತು ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಅದೇ ದಾರಿಯಲ್ಲಿ ಸಾಗುತ್ತಿದ್ದ ಪ್ರಯಾಣಿಕರಿಂದ ಮಾಹಿತಿ ಪಡೆದ ಸ್ಥಳೀಯ ಸಮಾಜಸೇವಕ ಮಹಮ್ಮದ್ ಆರೀಫ್, ಚೆಕ್ಪೋಸ್ಟ್ ಅರಣ್ಯ ಸಿಬ್ಬಂದಿ ಬಸವರಾಜ್ ಬಗಲಿ, ಪೊಲೀಸ್ ಸಿಬ್ಬಂದಿ ಸಚಿನ್ ಅವರ ತಂಡ ಸ್ಥಳಕ್ಕೆ ಧಾವಿಸಿದೆ. ತಕ್ಷಣ ಕಾರಿನಲ್ಲಿದ್ದ ತರೀಕೆರೆಯ ರಾಕೇಶ್, ಸಂತೋಷ್, ಶಿವು, ಅಭಿಜಿತ್, ಹಾಲೇಶ್ ಅವರನ್ನು ಕಾರಿನಿಂದ ಹೊರ ತೆಗೆದು ರಕ್ಷಣೆ ಮಾಡಲಾಗಿದೆ.