ದನಗಳನ್ನು ರಸ್ತೆಗೆ ಬಿಡಬೇಡಿ, ಬಿಟ್ಟರೆ ಅಂತಹ ದನಗಳನ್ನು ಗೋಶಾಲೆಗೆ ಬಿಡಲಾಗುವುದು ಎಂದುಹಲವು ಬಾರಿ ದನಗಳ ವಾರಸುದಾರರಿಗೆ ಆಯಾ ಭಾಗದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚರಿಸಿದ್ದರೂ ಮಾಲೀಕರು ಮಾತ್ರ ಎಚ್ಚೆತ್ತುಕೊಂಡಿಲ್ಲ. ನಿತ್ಯ ರಸ್ತೆ ಅಪಘಾತಕ್ಕೆ ಜಾನುವಾರು ಬಲಿಯಾಗುತ್ತಿವೆ. ಬಣಕಲ್, ಚಕ್ಕಮಕ್ಕಿ ಬಗ್ಗಸಗೋಡು ಭಾಗದಲ್ಲಿ 50ಕ್ಕೂ ಹೆಚ್ಚು ದನಗಳು ಈವರೆಗೆ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿವೆ.