2013 ರಿಂದ 2018ರವರ ಅವಧಿಯಲ್ಲಿ ಶಿವಕುಮಾರ್ ಅವರ ಆಸ್ತಿ ಎಷ್ಟಿತ್ತು. ಬಳಿಕ ಎಷ್ಟು ಹೆಚ್ಚಿದೆ ಎಂಬ ಬಗ್ಗೆ ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತ್ತು. ತನಿಖೆ ಮುಕ್ತಾಯದ ಹಂತದಲ್ಲಿರುವಾಗಲೇ ಪ್ರಕರಣವನ್ನು ವಾಪಸ್ ಪಡೆಯಲು ನಿರ್ಣಯ ಕೈಗೊಂಡಿರುವುದು ಸರ್ಕಾರದ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಛೇಡಿಸಿದ್ದಾರೆ.