<p><strong>ಕಡೂರು:</strong> ತಾಲ್ಲೂಕಿನಲ್ಲಿ ಸರಗಳ್ಳತನ ಮತ್ತು ಮನೆಗೆ ನುಗ್ಗಿ ಚಿನ್ನದಾಭರಣ ಕಳವು ಮಾಡಿದ ಎರಡು ಪ್ರತ್ಯೇಕ ಘಟನೆಗಳು ಶುಕ್ರವಾರ ನಡೆದಿವೆ.</p>.<p>ಬೀರೂರು ಬಿಇಒ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರುಣಾ ಅವರು, ಕಡೂರಿನಿಂದ ಬೀರೂರಿಗೆ ಬಂದು ಪ್ರವಾಸಿಮಂದಿರ ಸಮೀಪ ಬಸವೇಶ್ವರ ಸಾಮಿಲ್ ಹಿಂಭಾಗದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು ಸರ ಕಸಿದು ಪರಾರಿಯಾಗಿದ್ದಾರೆ.</p>.<p>ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಅರುಣಾ ಅವರ ಕುತ್ತಿಗೆಯಲ್ಲಿದ್ದ 45 ಗ್ರಾಂ. ತೂಕದ ಚಿನ್ನದ ಸರವನ್ನು ಬಲವಂತವಾಗಿ ಕಿತ್ತುಕೊಂಡು ಹೋಗಿದ್ದಾರೆ. ಈ ಕುರಿತು ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಇದೇ ತಾಲ್ಲೂಕಿನ ಪಂಚನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಘಟನೆ ನಡೆದಿದೆ. ತರಕಾರಿ ವ್ಯಾಪಾರಿ ಪ್ರಕಾಶ್ ಅವರು ಗರಗದಹಳ್ಳಿಯ ಜಾತ್ರೆಗೆ ತೆರಳಿದ್ದ ವೇಳೆ ಮನೆಯಲ್ಲಿದ್ದ ಪತ್ನಿ ಗಂಗಮ್ಮ ಅವರ ಕುತ್ತಿಗೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳರು ಅಪಹರಿಸಿದ್ದಾರೆ.</p>.<p>ರಾತ್ರಿ ವೇಳೆ ಮನೆಯ ಬಾಗಿಲಿನ ಚಿಲಕವನ್ನು ಆಯುಧದಿಂದ ಮೀಟಿ ಒಳನುಗ್ಗಿದ ಇಬ್ಬರು ಅಪರಿಚಿತರು ಮನೆಯಲ್ಲಿ ಮಲಗಿದ್ದ ಗಂಗಮ್ಮ ಅವರ ಕುತ್ತಿಗೆಯಲ್ಲಿದ್ದ 63 ಗ್ರಾಂ ತೂಕದ ಎರಡು ಸರ, ತಾಳಿ ಮತ್ತು ಗುಂಡುಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.</p>.<p>ಮನೆಗೆ ನುಗ್ಗಿದವರು ಮುಖಕ್ಕೆ ಮಾಸ್ಕ್, ಕ್ಯಾಪ್ ಹಾಗೂ ಕೈಗೆ ಗ್ಲೌಸ್ ಧರಿಸಿದ್ದರಿಂದ ಗುರುತು ಪತ್ತೆಯಾಗಿಲ್ಲ. ಈ ಕುರಿತು ಪ್ರಕಾಶ್ ನೀಡಿದ ದೂರಿನ ಮೇರೆಗೆ ಪಂಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು:</strong> ತಾಲ್ಲೂಕಿನಲ್ಲಿ ಸರಗಳ್ಳತನ ಮತ್ತು ಮನೆಗೆ ನುಗ್ಗಿ ಚಿನ್ನದಾಭರಣ ಕಳವು ಮಾಡಿದ ಎರಡು ಪ್ರತ್ಯೇಕ ಘಟನೆಗಳು ಶುಕ್ರವಾರ ನಡೆದಿವೆ.</p>.<p>ಬೀರೂರು ಬಿಇಒ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರುಣಾ ಅವರು, ಕಡೂರಿನಿಂದ ಬೀರೂರಿಗೆ ಬಂದು ಪ್ರವಾಸಿಮಂದಿರ ಸಮೀಪ ಬಸವೇಶ್ವರ ಸಾಮಿಲ್ ಹಿಂಭಾಗದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು ಸರ ಕಸಿದು ಪರಾರಿಯಾಗಿದ್ದಾರೆ.</p>.<p>ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಅರುಣಾ ಅವರ ಕುತ್ತಿಗೆಯಲ್ಲಿದ್ದ 45 ಗ್ರಾಂ. ತೂಕದ ಚಿನ್ನದ ಸರವನ್ನು ಬಲವಂತವಾಗಿ ಕಿತ್ತುಕೊಂಡು ಹೋಗಿದ್ದಾರೆ. ಈ ಕುರಿತು ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಇದೇ ತಾಲ್ಲೂಕಿನ ಪಂಚನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಘಟನೆ ನಡೆದಿದೆ. ತರಕಾರಿ ವ್ಯಾಪಾರಿ ಪ್ರಕಾಶ್ ಅವರು ಗರಗದಹಳ್ಳಿಯ ಜಾತ್ರೆಗೆ ತೆರಳಿದ್ದ ವೇಳೆ ಮನೆಯಲ್ಲಿದ್ದ ಪತ್ನಿ ಗಂಗಮ್ಮ ಅವರ ಕುತ್ತಿಗೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳರು ಅಪಹರಿಸಿದ್ದಾರೆ.</p>.<p>ರಾತ್ರಿ ವೇಳೆ ಮನೆಯ ಬಾಗಿಲಿನ ಚಿಲಕವನ್ನು ಆಯುಧದಿಂದ ಮೀಟಿ ಒಳನುಗ್ಗಿದ ಇಬ್ಬರು ಅಪರಿಚಿತರು ಮನೆಯಲ್ಲಿ ಮಲಗಿದ್ದ ಗಂಗಮ್ಮ ಅವರ ಕುತ್ತಿಗೆಯಲ್ಲಿದ್ದ 63 ಗ್ರಾಂ ತೂಕದ ಎರಡು ಸರ, ತಾಳಿ ಮತ್ತು ಗುಂಡುಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.</p>.<p>ಮನೆಗೆ ನುಗ್ಗಿದವರು ಮುಖಕ್ಕೆ ಮಾಸ್ಕ್, ಕ್ಯಾಪ್ ಹಾಗೂ ಕೈಗೆ ಗ್ಲೌಸ್ ಧರಿಸಿದ್ದರಿಂದ ಗುರುತು ಪತ್ತೆಯಾಗಿಲ್ಲ. ಈ ಕುರಿತು ಪ್ರಕಾಶ್ ನೀಡಿದ ದೂರಿನ ಮೇರೆಗೆ ಪಂಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>