<p><strong>ನರಸಿಂಹರಾಜಪುರ:</strong> ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಸ್ಯೆಗಳನ್ನು ಆಲಿಸಿ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಗ್ರಾಮ ಮಟ್ಟದಲ್ಲೂ ಪೊಲೀಸ್ ಇಲಾಖೆಯಿಂದ ಪ್ರತಿ ತಿಂಗಳು ಸಭೆ ಆಯೋಜಿಸಲಾಗುವುದು ಎಂದು ಪೊಲೀಸ್ ಇನ್ಸ್ಪೆಕ್ಟರ್ ವಸಂತ್ ಶಂಕರ್ ಭಾಗವತ್ ತಿಳಿಸಿದರು.</p>.<p>ಈಚೆಗೆ ಮೃತಪಟ್ಟ ಯೋಧ ಎಂ.ಎನ್. ಗಣೇಶ್ ಅವರಿಗೆ ಶ್ರದ್ಧಾಂಜಲಿ ಹಾಗೂ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿನಿ ಕಾವ್ಯಶ್ರೀಗೆ ಸನ್ಮಾನ ಸಮಾರಂಭ ತಾಲ್ಲೂಕು ಛಲವಾದಿ ಮಹಾಸಭಾ ವತಿಯಿಂದ ಬಾವಿಹಟ್ಟಿಯ ಮುತ್ತಿನಮ್ಮ ಗದ್ದುಗೆ ವ್ಯಾಪ್ತಿಯಲ್ಲಿ ಭಾನುವಾರ ನಡೆಯಿತು. ಈ ವೇಳೆ ಮಾತನಾಡಿದ ಅವರು, ‘ಪೊಲೀಸ್ ಠಾಣೆಯಲ್ಲಿ ಸಭೆ ನಡೆಸುವುದರ ಜತೆಗೆ ಗ್ರಾಮ ಮಟ್ಟದಲ್ಲಿ ಸಮುದಾಯದವರನ್ನು ಸೇರಿಸಿ ಸಮಸ್ಯೆ ಆಲಿಸಲಾಗುವುದು’ ಎಂದರು.</p>.<p>ಛಲವಾದಿ ಮಹಾಸಭಾದ ಕಾರ್ಯದರ್ಶಿ ಮಾತನಾಡಿ, ‘ಸಮುದಾಯದವರಾಗಿದ್ದ ಯೋಧ ಗಣೇಶ್ ಅವರ ಅಕಾಲಿಕ ನಿಧನದಿಂದ ದೇಶಕ್ಕೆ ಹಾಗೂ ಕುಟುಂಬಕ್ಕೆ ನಷ್ಟವಾಗಿದೆ. ಕಾವ್ಯಶ್ರೀ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ 580 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದು, ಅವರ ಸಾಧನೆ ಇತರರಿಗೆ ಪ್ರೇರಣೆಯಾಗಲಿ’ ಎಂದು ಹೇಳಿದರು.</p>.<p>ದಲಿತ ಸಂಘರ್ಷ ಸಮಿತಿಯ ಮುಖಂಡ ರಾಮು ಮಾತನಾಡಿದರು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ವಿದ್ಯಾರ್ಥಿನಿ ಕಾವ್ಯಶ್ರೀ, ಸಾಧನೆ ಮಾಡಿದವರು ಗುರುತಿಸಿ ಪ್ರೋತ್ಸಾಹಿಸಿದರೆ ಇನ್ನಷ್ಟು ಸಾಧನೆ ಮಾಡಲು ಪ್ರೇರಣೆಯಾಗುತ್ತದೆ ಎಂದರು.</p>.<p>ಪೊಲೀಸ್ ಸಬ್ ಇನ್ಸ್ಪೆಕ್ಟರ್ ದಿಲೀಪ್ ಕುಮಾರ್, ಮುತ್ತಿನಮ್ಮ ದೇವಸ್ಥಾನ ಸಮಿತಿಯ ಅಧ್ಯಕ್ಷ ರವಿಪ್ರಕಾಶ್, ಛಲವಾದಿ ಮಹಾಸಭಾದ ಖಜಾಂಚಿ ಚಂದ್ರಶೇಖರ್, ಲತಾ, ಹನುಮಂತ, ಬಾಬು, ಪ್ರೇಮಾ, ಶಿವನಗರ ಸಣ್ಣಪ್ಪ, ಭಾನುಮತಿ, ಪವಿತ್ರಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ:</strong> ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಸ್ಯೆಗಳನ್ನು ಆಲಿಸಿ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಗ್ರಾಮ ಮಟ್ಟದಲ್ಲೂ ಪೊಲೀಸ್ ಇಲಾಖೆಯಿಂದ ಪ್ರತಿ ತಿಂಗಳು ಸಭೆ ಆಯೋಜಿಸಲಾಗುವುದು ಎಂದು ಪೊಲೀಸ್ ಇನ್ಸ್ಪೆಕ್ಟರ್ ವಸಂತ್ ಶಂಕರ್ ಭಾಗವತ್ ತಿಳಿಸಿದರು.</p>.<p>ಈಚೆಗೆ ಮೃತಪಟ್ಟ ಯೋಧ ಎಂ.ಎನ್. ಗಣೇಶ್ ಅವರಿಗೆ ಶ್ರದ್ಧಾಂಜಲಿ ಹಾಗೂ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿನಿ ಕಾವ್ಯಶ್ರೀಗೆ ಸನ್ಮಾನ ಸಮಾರಂಭ ತಾಲ್ಲೂಕು ಛಲವಾದಿ ಮಹಾಸಭಾ ವತಿಯಿಂದ ಬಾವಿಹಟ್ಟಿಯ ಮುತ್ತಿನಮ್ಮ ಗದ್ದುಗೆ ವ್ಯಾಪ್ತಿಯಲ್ಲಿ ಭಾನುವಾರ ನಡೆಯಿತು. ಈ ವೇಳೆ ಮಾತನಾಡಿದ ಅವರು, ‘ಪೊಲೀಸ್ ಠಾಣೆಯಲ್ಲಿ ಸಭೆ ನಡೆಸುವುದರ ಜತೆಗೆ ಗ್ರಾಮ ಮಟ್ಟದಲ್ಲಿ ಸಮುದಾಯದವರನ್ನು ಸೇರಿಸಿ ಸಮಸ್ಯೆ ಆಲಿಸಲಾಗುವುದು’ ಎಂದರು.</p>.<p>ಛಲವಾದಿ ಮಹಾಸಭಾದ ಕಾರ್ಯದರ್ಶಿ ಮಾತನಾಡಿ, ‘ಸಮುದಾಯದವರಾಗಿದ್ದ ಯೋಧ ಗಣೇಶ್ ಅವರ ಅಕಾಲಿಕ ನಿಧನದಿಂದ ದೇಶಕ್ಕೆ ಹಾಗೂ ಕುಟುಂಬಕ್ಕೆ ನಷ್ಟವಾಗಿದೆ. ಕಾವ್ಯಶ್ರೀ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ 580 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದು, ಅವರ ಸಾಧನೆ ಇತರರಿಗೆ ಪ್ರೇರಣೆಯಾಗಲಿ’ ಎಂದು ಹೇಳಿದರು.</p>.<p>ದಲಿತ ಸಂಘರ್ಷ ಸಮಿತಿಯ ಮುಖಂಡ ರಾಮು ಮಾತನಾಡಿದರು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ವಿದ್ಯಾರ್ಥಿನಿ ಕಾವ್ಯಶ್ರೀ, ಸಾಧನೆ ಮಾಡಿದವರು ಗುರುತಿಸಿ ಪ್ರೋತ್ಸಾಹಿಸಿದರೆ ಇನ್ನಷ್ಟು ಸಾಧನೆ ಮಾಡಲು ಪ್ರೇರಣೆಯಾಗುತ್ತದೆ ಎಂದರು.</p>.<p>ಪೊಲೀಸ್ ಸಬ್ ಇನ್ಸ್ಪೆಕ್ಟರ್ ದಿಲೀಪ್ ಕುಮಾರ್, ಮುತ್ತಿನಮ್ಮ ದೇವಸ್ಥಾನ ಸಮಿತಿಯ ಅಧ್ಯಕ್ಷ ರವಿಪ್ರಕಾಶ್, ಛಲವಾದಿ ಮಹಾಸಭಾದ ಖಜಾಂಚಿ ಚಂದ್ರಶೇಖರ್, ಲತಾ, ಹನುಮಂತ, ಬಾಬು, ಪ್ರೇಮಾ, ಶಿವನಗರ ಸಣ್ಣಪ್ಪ, ಭಾನುಮತಿ, ಪವಿತ್ರಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>