<p><strong>ಮೂಡಿಗೆರೆ (ಚಿಕ್ಕಮಗಳೂರು):</strong> ದಕ್ಷಿಣ ಕನ್ನಡ–ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.</p>.<p>ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಗೆ ಸೇರಿರುವ ಪ್ರದೇಶದೊಳಗೆ ಸಂಭವಿಸಿರುವ ಈ ಅಗ್ನಿ ಅವಘಡದಲ್ಲಿ, ಹತ್ತಾರು ಎಕರೆ ಹುಲ್ಲುಗಾವಲು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಎರಡು ಗಂಟೆಗೂ ಹೆಚ್ಚು ಕಾಲ ಬೆಂಕಿಯ ಜ್ವಾಲೆ ಧಗಧಗಿಸುತ್ತಿತ್ತು.</p>.<p>ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಭಾರಿ ಹಾನಿಯಾಗುವ ಆತಂಕ ವ್ಯಕ್ತವಾಗಿದೆ. ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವ ವಾಹನ ಸವಾರರಲ್ಲಿ ಆತಂಕ ಮೂಡಿದೆ.</p>.<p>ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿಯಿಂದ ಇಡೀ ಗುಡ್ಡವೇ ಅಗ್ನಿಯುಂಡೆಯಂತೆ ಕಾಣುತ್ತಿದೆ. </p>.<p>ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ತರಲು ಪ್ರಯತ್ನಗಳು ಮುಂದುವರಿದಿವೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿದ್ದು, ತಡರಾತ್ರಿಯವರೆಗೂ ಕಾರ್ಯಚರಣೆ ಮುಂದುವರಿದಿತ್ತು.</p>.<p>ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ (ಚಿಕ್ಕಮಗಳೂರು):</strong> ದಕ್ಷಿಣ ಕನ್ನಡ–ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.</p>.<p>ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಗೆ ಸೇರಿರುವ ಪ್ರದೇಶದೊಳಗೆ ಸಂಭವಿಸಿರುವ ಈ ಅಗ್ನಿ ಅವಘಡದಲ್ಲಿ, ಹತ್ತಾರು ಎಕರೆ ಹುಲ್ಲುಗಾವಲು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಎರಡು ಗಂಟೆಗೂ ಹೆಚ್ಚು ಕಾಲ ಬೆಂಕಿಯ ಜ್ವಾಲೆ ಧಗಧಗಿಸುತ್ತಿತ್ತು.</p>.<p>ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಭಾರಿ ಹಾನಿಯಾಗುವ ಆತಂಕ ವ್ಯಕ್ತವಾಗಿದೆ. ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವ ವಾಹನ ಸವಾರರಲ್ಲಿ ಆತಂಕ ಮೂಡಿದೆ.</p>.<p>ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿಯಿಂದ ಇಡೀ ಗುಡ್ಡವೇ ಅಗ್ನಿಯುಂಡೆಯಂತೆ ಕಾಣುತ್ತಿದೆ. </p>.<p>ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ತರಲು ಪ್ರಯತ್ನಗಳು ಮುಂದುವರಿದಿವೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿದ್ದು, ತಡರಾತ್ರಿಯವರೆಗೂ ಕಾರ್ಯಚರಣೆ ಮುಂದುವರಿದಿತ್ತು.</p>.<p>ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>