ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಮಂಗಳವಾರದಿಂದ ದಿನದ 24ಗಂಟೆಯೂ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಈ ಪ್ರದೇಶದಲ್ಲಿ ಮಳೆ ಕ್ಷೀಣಿಸಿದೆ ಹಾಗೂ ಮಂಜು ಮುಸುಕು ವಾತಾವರಣವೂ ಕಡಿಮೆಯಾಗಿದೆ. ಹೀಗಾಗಿ, ರಾತ್ರಿ ಸಂಚಾರಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶದಲ್ಲಿ ತಿಳಿಸಿದ್ದಾರೆ.