‘ಚಾರ್ಮಾಡಿಯಿಂದ ಕೊಟ್ಟಿಗೆಹಾರ ಬರಬೇಕಾದರೆ ಜೀವವನ್ನು ಕೈಯಲ್ಲಿ ಹಿಡಿದುಕೊಂಡೇ ಬರಬೇಕು. ಇಕ್ಕಟ್ಟಿನ ಸ್ಥಳದಲ್ಲಿ ಕಾಡಾನೆ ಪ್ರತ್ಯಕ್ಷವಾದರೆ ಜೀವಕ್ಕೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಲಾಕ್ಡೌನ್ನಿಂದ ತರಕಾರಿ ವಾಹನಗಳು, ಆಂಬುಲೆನ್ಸ್ ಮತ್ತಿತರ ಅಗತ್ಯವಾದ ವಾಹನಗಳು ಓಡಾಡುತ್ತಿರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಈ ಒಂಟಿ ಸಲಗನನ್ನು ಸ್ಥಳಾಂತರಿಸಬೇಕು’ ಎಂದು ತರಕಾರಿ ವಾಹನ ಸವಾರ ಮಂಜುನಾಥ್ ಒತ್ತಾಯಿಸಿದ್ದಾರೆ.