‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಶೃಂಗೇರಿ ವಲಯಾರಣ್ಯಾಧಿಕಾರಿ ಸಂಪತ್ ಪಟೇಲ್, ‘ಇದೇ ಮೊದಲ ಬಾರಿಗೆ ಈ ವ್ಯಾಪ್ತಿಯಲ್ಲಿ ಚಿರತೆ ದಾಳಿ ಮಾಡಿರುವುದು ಇಲಾಖೆಗೆ ಮಾಹಿತಿ ಸಿಕ್ಕಿದೆ. ಈಗಾಗಲೇ ಇಲಾಖೆ ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಚಿರತೆ ಚಲನವಲನವನ್ನು ಆಧರಿಸಿ, ಬೋನು ಇರಿಸಲಾಗಿದೆ. ಶೀಘ್ರವೇ ಅದನ್ನು ಸೆರೆ ಹಿಡಿಯಲಾಗುತ್ತದೆ’ ಎಂದು ಪ್ರತಿಕ್ರಿಯಿಸಿದ್ದಾರೆ.