ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉರುಳಿಗೆ ಸಿಲುಕಿ ಚಿರತೆ ಸಾವು

Last Updated 27 ಮಾರ್ಚ್ 2021, 15:18 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ತಾಲ್ಲೂಕಿನ ಕೆಳಗಣೆ ಗ್ರಾಮದ ಬಳಿಯ ಎಸ್ಟೇಟ್‌ವೊಂದರಲ್ಲಿ ಉರುಳಿಗೆ ಸಿಲುಕಿ ಐದು ವರ್ಷದ ಗಂಡು ಚಿರತೆಯೊಂದು ಶನಿವಾರ ಮೃತಪಟ್ಟಿದೆ.

ಚಿರತೆ ಗಾಯಗೊಂಡು ನರಳಾಡುತ್ತಿದ್ದನ್ನು ನೋಡಿ ಗ್ರಾಮಸ್ಥರು ಅರಣ್ಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಡಿಎಫ್‌ಒ ಎನ್‌.ಎಚ್‌.ಜಗನ್ನಾಥ್‌, ಎಸಿಎಫ್‌ ಮುದ್ದಣ್ಣ, ಇತರ ಸಿಬ್ಬಂಧಿ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದ್ದಾರೆ.

‘ಚಿರತೆ ಉರುಳಿಗೆ ಸಿಲುಕಿ ಹೊಟ್ಟೆ ಭಾಗ ಸೀಳಿತ್ತು. ನಾವು ಹೋದಾಗ ಒದ್ದಾಡುತ್ತಿತ್ತು, ಸ್ವಲ್ಪ ಹೊತ್ತಿನಲ್ಲಿ ಮೃತಪಟ್ಟಿತ್ತು. ಅದು ಶುಕ್ರವಾರ ಉರುಳಿಗೆ ಬಿದ್ದಿದೆ ಎಂದು ಶಂಕಿಸಲಾಗಿದೆ. ಎಸ್ಟೇಟ್‌ ಮಾಲೀಕನ ವಿರುದ್ಧ ಪ್ರಕಣ ದಾಖಲಿಸಲಾಗಿದೆ’ ಎಂದು ಎಸಿಎಫ್‌ ಮುದ್ದಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು.

ಶಿವಮೊಗ್ಗ ಸಮೀಪದ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಡಾ.ಸುಜಯ್‌ ಅವರು ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT