‘ಮೂರು ದಿನಗಳ ಹಿಂದೆ ಕುತ್ಲೂರಿನ ಬಜಿಲಪಾದೆಯಲ್ಲಿ ಚಿರತೆಯೊಂದು ಪತ್ತೆಯಾಗಿತ್ತು. ಅದೇ ಚಿರತೆ ಇಲ್ಲಿಯೂ ದಾಳಿ ಮಾಡಿರುವ ಶಂಕೆಯಿದೆ. ಬಜಿಲಪಾದೆಯಲ್ಲಿ ಬೋನು ಇಟ್ಟಿದ್ದೇವೆ. ಮಂಗಳವಾರವೇ ನಡುಚ್ಚೂರು ಪರಿಸರದಲ್ಲಿಯೂ ಬೋನು ಇಟ್ಟು, ಚಿರತೆಯನ್ನು ಸೆರೆ ಹಿಡಿಯಲು ಪ್ರಯತ್ನಿಸುತ್ತೇವೆ’ ಎಂದು ವೇಣೂರು ವಲಯ ಅರಣಾಧಿಕಾರಿ ಮಹೀಂ ಜನ್ ತಿಳಿಸಿದ್ದಾರೆ.