<p><strong>ಮೂಡಿಗೆರೆ</strong>: ತಾಲ್ಲೂಕಿನ ಬಣಕಲ್ ಪಟ್ಟಣ ಬಳಿಯ ಹೇಮಾವತಿ ನದಿಯಲ್ಲಿ ನೂರಾರು ಮೀನುಗಳು ಸಾವನ್ನಪ್ಪಿದ್ದು, ತೀರದಲ್ಲಿ ತೇಲುತ್ತಿದ ದೃಶ್ಯ ಗುರುವಾರ ಕಂಡು ಬಂದಿತು.</p>.<p>ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ಮೀನು ಹಿಡಿಯುವುದಕ್ಕೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಅಡಿಕೆ ಬೆಳೆಗೆ ಬಳಸುವ ರಾಸಾಯನಿಕ ಪದಾರ್ಥವಾದ ಮೈಲುತುತ್ತವನ್ನು ನದಿಯಲ್ಲಿ ಮಿಶ್ರಣ ಮಾಡಿರುವ ಶಂಕೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.</p>.<p>ಮಲೆನಾಡಿಗರ ಪಾಲಿನ ಜೀವನದಿಯಾಗಿರುವ ಹೇಮಾವತಿ ನದಿಯ ನೀರು ಕಲುಷಿತಗೊಂಡಿರುವ ಅನುಮಾನ ವ್ಯಕ್ತವಾಗಿದ್ದು, ಈ ನೀರನ್ನು ಕುಡಿಯಲು ಬಳಸುವ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ಜನರು ಆತಂಕಗೊಂಡಿದ್ದಾರೆ. ನದಿ ಕಲುಷಿತಗೊಳಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p>.<p>ತಾಲ್ಲೂಕಿನ ಜಾವಳಿಯಲ್ಲಿ ಹುಟ್ಟಿರುವ ಹೇಮಾವತಿಯ ನೀರು ಮೂಡಿಗೆರೆ ಮೂಲಕ ಹಾಸನ ಜಿಲ್ಲೆಯ ಗೊರೂರಿನ ಡ್ಯಾಂಗೆ ಸೇರ್ಪಡೆಯಾಗುತ್ತದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ</strong>: ತಾಲ್ಲೂಕಿನ ಬಣಕಲ್ ಪಟ್ಟಣ ಬಳಿಯ ಹೇಮಾವತಿ ನದಿಯಲ್ಲಿ ನೂರಾರು ಮೀನುಗಳು ಸಾವನ್ನಪ್ಪಿದ್ದು, ತೀರದಲ್ಲಿ ತೇಲುತ್ತಿದ ದೃಶ್ಯ ಗುರುವಾರ ಕಂಡು ಬಂದಿತು.</p>.<p>ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ಮೀನು ಹಿಡಿಯುವುದಕ್ಕೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಅಡಿಕೆ ಬೆಳೆಗೆ ಬಳಸುವ ರಾಸಾಯನಿಕ ಪದಾರ್ಥವಾದ ಮೈಲುತುತ್ತವನ್ನು ನದಿಯಲ್ಲಿ ಮಿಶ್ರಣ ಮಾಡಿರುವ ಶಂಕೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.</p>.<p>ಮಲೆನಾಡಿಗರ ಪಾಲಿನ ಜೀವನದಿಯಾಗಿರುವ ಹೇಮಾವತಿ ನದಿಯ ನೀರು ಕಲುಷಿತಗೊಂಡಿರುವ ಅನುಮಾನ ವ್ಯಕ್ತವಾಗಿದ್ದು, ಈ ನೀರನ್ನು ಕುಡಿಯಲು ಬಳಸುವ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ಜನರು ಆತಂಕಗೊಂಡಿದ್ದಾರೆ. ನದಿ ಕಲುಷಿತಗೊಳಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p>.<p>ತಾಲ್ಲೂಕಿನ ಜಾವಳಿಯಲ್ಲಿ ಹುಟ್ಟಿರುವ ಹೇಮಾವತಿಯ ನೀರು ಮೂಡಿಗೆರೆ ಮೂಲಕ ಹಾಸನ ಜಿಲ್ಲೆಯ ಗೊರೂರಿನ ಡ್ಯಾಂಗೆ ಸೇರ್ಪಡೆಯಾಗುತ್ತದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>