<p><strong>ಬಾಳೆಹೊನ್ನೂರು</strong>: ರಂಭಾಪುರಿ ಪೀಠದಲ್ಲಿ ಅಭಿವೃದ್ಧಿಪರ ಕಾರ್ಯಗಳು ವರ್ಷವಿಡೀ ತ್ವರಿತಗತಿಯಲ್ಲಿ ನಡೆಯು ತ್ತಿದ್ದು, ಪೀಠಕ್ಕೆ ಬರುವ ಭಕ್ತರಿಗೆ ಮೂಲಸೌಲಭ್ಯ ಒದಗಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ರಂಭಾಪುರಿ ಪೀಠದಲ್ಲಿ ಕರ್ನಾಟಕ ನೀರಾವರಿ ನಿಗಮದಿಂದ ರೈತ ಭವನ ಹಾಗೂ ಸಣ್ಣ ನೀರಾವರಿ ಇಲಾಖೆಯಿಂದ ಪುಷ್ಕರಣಿ ನಿರ್ಮಾಣಕ್ಕೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಂಭಾಪುರಿ ಪೀಠದಲ್ಲಿ ಭಕ್ತರ ಅನುಕೂಲಕ್ಕಾಗಿ ಪುಷ್ಕರಣಿ ನಿರ್ಮಾಣ ಮಾಡಬೇಕು ಎಂಬ ಉದ್ದೇಶದಿಂದ ಸರ್ಕಾರಕ್ಕೆ ಮನವಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ₹3 ಕೋಟಿ ವೆಚ್ಚದಲ್ಲಿ ಪುಷ್ಕರಣಿ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. 100x80 ಅಡಿ ಅಗಲ, 10ರಿಂದ 12 ಅಡಿ ಆಳ ಹೊಂದಿರುವ ಪುಷ್ಕರಣಿ ನಿರ್ಮಿಸಲಿದ್ದು, ಇದು ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಸ್ನಾನ, ಕೈಕಾಲು ತೊಳೆದುಕೊಳ್ಳಲು ಉಪಯೋಗಕ್ಕೆ ಬರಲಿದೆ.</p>.<p>ಕರ್ನಾಟಕ ನೀರಾವರಿ ನಿಗಮದ ವತಿಯಿಂದ ₹4 ಕೋಟಿ ವೆಚ್ಚದಲ್ಲಿ ರೈತ ಭವನ ಹೆಸರಿನಲ್ಲಿ ಯಾತ್ರಿ ನಿವಾಸ ನಿರ್ಮಾಣವಾಗಲಿದೆ. ಪೀಠಕ್ಕೆ ಬರುವ ಭಕ್ತರು ತಂಗಲು ಇದರಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದರು.</p>.<p>ಮಾ.5ರಂದು ಪೀಠದಲ್ಲಿ ನಡೆಯಲಿ ರುವ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವ, ಜಗದ್ಗುರು ರೇಣುಕಾಚಾರ್ಯ ಜಯಂತಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಕಾಮಗಾರಿಯು ಬಹುತೇಕ ಭಾಗ ನಡೆ ಯುವ ನಿರೀಕ್ಷೆಯಿದೆ ಎಂದು ಹೇಳಿದರು.</p>.<p>ಕರ್ನಾಟಕ ನೀರಾವರಿ ನಿಗಮದ ಇಇ ಜಗದೀಶ್, ಎಇಇ ರವಿಕುಮಾರ್, ಗುತ್ತಿಗೆದಾರ ಋಷ್ಯಶೃಂಗ, ಗೌರೀಶ್, ಸಣ್ಣ ನೀರಾವರಿ ಇಲಾಖೆಯ ಇಇ ದಕ್ಷಿಣಾಮೂರ್ತಿ, ಎಇಇ ಭರತ್, ಮೂಡ್ಲಗಿರಿಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು</strong>: ರಂಭಾಪುರಿ ಪೀಠದಲ್ಲಿ ಅಭಿವೃದ್ಧಿಪರ ಕಾರ್ಯಗಳು ವರ್ಷವಿಡೀ ತ್ವರಿತಗತಿಯಲ್ಲಿ ನಡೆಯು ತ್ತಿದ್ದು, ಪೀಠಕ್ಕೆ ಬರುವ ಭಕ್ತರಿಗೆ ಮೂಲಸೌಲಭ್ಯ ಒದಗಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ರಂಭಾಪುರಿ ಪೀಠದಲ್ಲಿ ಕರ್ನಾಟಕ ನೀರಾವರಿ ನಿಗಮದಿಂದ ರೈತ ಭವನ ಹಾಗೂ ಸಣ್ಣ ನೀರಾವರಿ ಇಲಾಖೆಯಿಂದ ಪುಷ್ಕರಣಿ ನಿರ್ಮಾಣಕ್ಕೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಂಭಾಪುರಿ ಪೀಠದಲ್ಲಿ ಭಕ್ತರ ಅನುಕೂಲಕ್ಕಾಗಿ ಪುಷ್ಕರಣಿ ನಿರ್ಮಾಣ ಮಾಡಬೇಕು ಎಂಬ ಉದ್ದೇಶದಿಂದ ಸರ್ಕಾರಕ್ಕೆ ಮನವಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ₹3 ಕೋಟಿ ವೆಚ್ಚದಲ್ಲಿ ಪುಷ್ಕರಣಿ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. 100x80 ಅಡಿ ಅಗಲ, 10ರಿಂದ 12 ಅಡಿ ಆಳ ಹೊಂದಿರುವ ಪುಷ್ಕರಣಿ ನಿರ್ಮಿಸಲಿದ್ದು, ಇದು ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಸ್ನಾನ, ಕೈಕಾಲು ತೊಳೆದುಕೊಳ್ಳಲು ಉಪಯೋಗಕ್ಕೆ ಬರಲಿದೆ.</p>.<p>ಕರ್ನಾಟಕ ನೀರಾವರಿ ನಿಗಮದ ವತಿಯಿಂದ ₹4 ಕೋಟಿ ವೆಚ್ಚದಲ್ಲಿ ರೈತ ಭವನ ಹೆಸರಿನಲ್ಲಿ ಯಾತ್ರಿ ನಿವಾಸ ನಿರ್ಮಾಣವಾಗಲಿದೆ. ಪೀಠಕ್ಕೆ ಬರುವ ಭಕ್ತರು ತಂಗಲು ಇದರಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದರು.</p>.<p>ಮಾ.5ರಂದು ಪೀಠದಲ್ಲಿ ನಡೆಯಲಿ ರುವ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವ, ಜಗದ್ಗುರು ರೇಣುಕಾಚಾರ್ಯ ಜಯಂತಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಕಾಮಗಾರಿಯು ಬಹುತೇಕ ಭಾಗ ನಡೆ ಯುವ ನಿರೀಕ್ಷೆಯಿದೆ ಎಂದು ಹೇಳಿದರು.</p>.<p>ಕರ್ನಾಟಕ ನೀರಾವರಿ ನಿಗಮದ ಇಇ ಜಗದೀಶ್, ಎಇಇ ರವಿಕುಮಾರ್, ಗುತ್ತಿಗೆದಾರ ಋಷ್ಯಶೃಂಗ, ಗೌರೀಶ್, ಸಣ್ಣ ನೀರಾವರಿ ಇಲಾಖೆಯ ಇಇ ದಕ್ಷಿಣಾಮೂರ್ತಿ, ಎಇಇ ಭರತ್, ಮೂಡ್ಲಗಿರಿಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>