<p><strong></strong>ನರಸಿಂಹರಾಜಪುರ: ಇಲ್ಲಿನ ರಾಘವೇಂದ್ರ ಬಡಾವಣೆಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಪಟ್ಟಣ ಪಂಚಾಯಿತಿಯಿಂದ ನಿವೇಶನ ನೀಡಲಾಗುವುದು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಜುಬೇದಾ ತಿಳಿಸಿದರು.</p>.<p>ಪಟ್ಟಣದ ಅಗ್ರಹಾರ ಸಮೀಪವಿರುವ ರಾಘವೇಂದ್ರ ಬಡಾವಣೆಯಲ್ಲಿ ಶನಿವಾರ ನಡೆದ ನಿವಾಸಿ ಅಸೋಸಿಯೇಷನ್ನ 11ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.</p>.<p>ಬಡಾವಣೆ ವ್ಯಾಪ್ತಿಯಲ್ಲಿನ ಉದ್ಯಾನ ನಿರ್ಮಾಣ ಹಾಗೂ ನಿವೇಶನ ಸ್ವಚ್ಛತೆ ಮಾಡಿಕೊಡುವುದಾಗಿ ಭರವಸೆ ನೀಡಿದರು.</p>.<p>ಪಟ್ಟಣ ಪಂಚಾಯಿತಿ ಸದಸ್ಯ ರೇಖಾ ಮಂಜುನಾಥ್ ಮಾತನಾಡಿ, ರಾಘವೇಂದ್ರ ಬಡಾವಣೆ ನಿವಾಸಿಗಳ ಬೇಡಿಕೆಯನ್ನು ಹಂತಹಂತವಾಗಿ ಈಡೇರಿಸಲಾಗುವುದು ಎಂದರು.</p>.<p>ಸಂಘದ ಗುಣಪಾಲ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಘವೇಂದ್ರ ಬಡಾವಣೆ ವ್ಯಾಪ್ತಿಯಲ್ಲಿ ಸಮುದಾಯಭವನ, ಉದ್ಯಾನ, ಚರಂಡಿಗೆ ಸ್ಲ್ಯಾಬ್, ಕುಡಿಯುವ ನೀರಿಗೆ ಓವರ್ಹೆಡ್ ಟ್ಯಾಂಕ್ ನಿರ್ಮಿಸಿಕೊಡಬೇಕು. ವೀರಮ್ಮಾಜಿ ಕೆರೆಯನ್ನು ಸ್ವಚ್ಛಗೊಳಿಸಬೇಕು ಎಂದರು.</p>.<p>ತಾಲ್ಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಸ್.ಎಸ್.ಶಾಂತಕುಮಾರ್ ಮಾತನಾಡಿ, ಮಾನವಿಯತೆ ಇದ್ದವರು ಮಾತ್ರ ಮನುಷ್ಯರಾಗುತ್ತಾರೆ. ಸಂಸ್ಕೃತಿ, ಸಂಸ್ಕಾರ, ಜೀವನದ ಮೌಲ್ಯಗಳಿಲ್ಲದವರು ಮನುಷ್ಯರಾಗಲು ಸಾಧ್ಯವಿಲ್ಲ ಎಂದರು.</p>.<p>ಅಧ್ಯಕ್ಷತೆಯನ್ನು ನಿವಾಸಿ ಅಸೋಸೊಯೇಷನ್ ಅಧ್ಯಕ್ಷೆ ಶೀಲಾ ಸುಂದರೇಶ್ ವಹಿಸಿದ್ದರು.</p>.<p>ನಿವಾಸಿ ಅಸೋಸಿಯೇಷನ್ನ ಗೌರವಾಧ್ಯಕ್ಷ ಜಿ.ಎಚ್. ಸುಂದರೇಶ್, ಅಸೋಸಿಯೇಷನ್ನ ಕಾರ್ಯದರ್ಶಿ ಸವಿತಾ ಕೃಷ್ಣಮೂರ್ತಿ, ವಿಜಯಕುಮಾರ್, ಸ್ವಾತಿ, ವಾಗ್ದೇವಿ ಇದ್ದರು.</p>.<p>ಬಡಾವಣೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ನಡೆದ ಆಟೋಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong></strong>ನರಸಿಂಹರಾಜಪುರ: ಇಲ್ಲಿನ ರಾಘವೇಂದ್ರ ಬಡಾವಣೆಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಪಟ್ಟಣ ಪಂಚಾಯಿತಿಯಿಂದ ನಿವೇಶನ ನೀಡಲಾಗುವುದು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಜುಬೇದಾ ತಿಳಿಸಿದರು.</p>.<p>ಪಟ್ಟಣದ ಅಗ್ರಹಾರ ಸಮೀಪವಿರುವ ರಾಘವೇಂದ್ರ ಬಡಾವಣೆಯಲ್ಲಿ ಶನಿವಾರ ನಡೆದ ನಿವಾಸಿ ಅಸೋಸಿಯೇಷನ್ನ 11ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.</p>.<p>ಬಡಾವಣೆ ವ್ಯಾಪ್ತಿಯಲ್ಲಿನ ಉದ್ಯಾನ ನಿರ್ಮಾಣ ಹಾಗೂ ನಿವೇಶನ ಸ್ವಚ್ಛತೆ ಮಾಡಿಕೊಡುವುದಾಗಿ ಭರವಸೆ ನೀಡಿದರು.</p>.<p>ಪಟ್ಟಣ ಪಂಚಾಯಿತಿ ಸದಸ್ಯ ರೇಖಾ ಮಂಜುನಾಥ್ ಮಾತನಾಡಿ, ರಾಘವೇಂದ್ರ ಬಡಾವಣೆ ನಿವಾಸಿಗಳ ಬೇಡಿಕೆಯನ್ನು ಹಂತಹಂತವಾಗಿ ಈಡೇರಿಸಲಾಗುವುದು ಎಂದರು.</p>.<p>ಸಂಘದ ಗುಣಪಾಲ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಘವೇಂದ್ರ ಬಡಾವಣೆ ವ್ಯಾಪ್ತಿಯಲ್ಲಿ ಸಮುದಾಯಭವನ, ಉದ್ಯಾನ, ಚರಂಡಿಗೆ ಸ್ಲ್ಯಾಬ್, ಕುಡಿಯುವ ನೀರಿಗೆ ಓವರ್ಹೆಡ್ ಟ್ಯಾಂಕ್ ನಿರ್ಮಿಸಿಕೊಡಬೇಕು. ವೀರಮ್ಮಾಜಿ ಕೆರೆಯನ್ನು ಸ್ವಚ್ಛಗೊಳಿಸಬೇಕು ಎಂದರು.</p>.<p>ತಾಲ್ಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಸ್.ಎಸ್.ಶಾಂತಕುಮಾರ್ ಮಾತನಾಡಿ, ಮಾನವಿಯತೆ ಇದ್ದವರು ಮಾತ್ರ ಮನುಷ್ಯರಾಗುತ್ತಾರೆ. ಸಂಸ್ಕೃತಿ, ಸಂಸ್ಕಾರ, ಜೀವನದ ಮೌಲ್ಯಗಳಿಲ್ಲದವರು ಮನುಷ್ಯರಾಗಲು ಸಾಧ್ಯವಿಲ್ಲ ಎಂದರು.</p>.<p>ಅಧ್ಯಕ್ಷತೆಯನ್ನು ನಿವಾಸಿ ಅಸೋಸೊಯೇಷನ್ ಅಧ್ಯಕ್ಷೆ ಶೀಲಾ ಸುಂದರೇಶ್ ವಹಿಸಿದ್ದರು.</p>.<p>ನಿವಾಸಿ ಅಸೋಸಿಯೇಷನ್ನ ಗೌರವಾಧ್ಯಕ್ಷ ಜಿ.ಎಚ್. ಸುಂದರೇಶ್, ಅಸೋಸಿಯೇಷನ್ನ ಕಾರ್ಯದರ್ಶಿ ಸವಿತಾ ಕೃಷ್ಣಮೂರ್ತಿ, ವಿಜಯಕುಮಾರ್, ಸ್ವಾತಿ, ವಾಗ್ದೇವಿ ಇದ್ದರು.</p>.<p>ಬಡಾವಣೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ನಡೆದ ಆಟೋಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>