<p><strong>ಜಯಪುರ (ಬಾಳೆಹೊನ್ನೂರು)</strong>: ಕೊಪ್ಪ ತಾಲ್ಲೂಕಿನ ಭುವನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉತ್ತಮೇಶ್ವರದ ಕೋಣೆಕೊಪ್ಪ ಎಂಬಲ್ಲಿ 14ನೇ ಶತಮಾನಕ್ಕೆ ಸೇರಿದ ವೀರಗಲ್ಲನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ನ.ಸುರೇಶ ಕಲ್ಕೆರೆ ಪತ್ತೆ ಮಾಡಿದ್ದಾರೆ.</p>.<p>ಸುಮಾರು 5 ಅಡಿ ಎತ್ತರ ಮತ್ತು 2 ಅಡಿ ಅಗಲವಿರುವ ಈ ವೀರಗಲ್ಲು ಮೂರು ಪಟ್ಟಿಕೆಯನ್ನು ಹೊಂದಿದ್ದು, ಕೆಳಗಿನ ಪಟ್ಟಿಕೆಯಲ್ಲಿ ಎರಡು ಸಾಲಿನ ಕನ್ನಡ ಲಿಪಿ ಮತ್ತು ಭಾಷೆಯಲ್ಲಿರುವ ಶಾಸನವನ್ನು ಕಾಣಬಹುದು. ಈ ವೀರಗಲ್ಲಿನ ಹೆಚ್ಚಿನ ಅಕ್ಷರಗಳು ತೃಟಿತಗೊಂಡಿದ್ದು, ಉಳಿದಿರುವ ಅಕ್ಷರದ ಆಧಾರದ ಮೇಲೆ ‘ಭಾವ ಸಂವತ್ಸರದಲ್ಲಿ ತಿಂಮಣ ನಾಯಕನ’ ಸ್ಮರಣಾರ್ಥವಾಗಿ ವೀರಗಲ್ಲನ್ನು ಹಾಕಲಾಗಿದೆ ಎಂದು ಅಂದಾಜಿಸಲಾಗಿದೆ. ಈ ಲಿಪಿಯು 14ನೇ ಶತಮಾನದ ಲಿಪಿಯನ್ನು ಹೋಲುತ್ತದೆ ಎಂದು ಅವರು ತಿಳಿಸಿದ್ದಾರೆ.</p>.<p>ವೀರಗಲ್ಲಿನ ಕೆಳಗಿನ ಪಟ್ಟಿಕೆಯಲ್ಲಿ ಕೈಯಲ್ಲಿ ಖಡ್ಗವನ್ನು (ಕತ್ತಿ) ಹಿಡಿದುಕೊಂಡು ಅಶ್ವದ ಮೇಲೆ ಕುಳಿತು ಯುದ್ಧ ಮಾಡುತ್ತಿರುವ ವೀರ ಹಾಗೂ ಬಿಲ್ಲು-ಬಾಣಗಳನ್ನು ಹಿಡಿದುಕೊಂಡು ಈತನ ವಿರುದ್ಧ ಹೋರಾಡುತ್ತಿರುವ ಸೈನಿಕರ ಉಬ್ಬು ಶಿಲ್ಪವನ್ನು ಕೆತ್ತಲಾಗಿದೆ. ಎರಡನೇ ಪಟ್ಟಿಕೆಯಲ್ಲಿ ಯುದ್ಧದಲ್ಲಿ ಮರಣ ಹೊಂದಿದ ವೀರನನ್ನು ಅಪ್ಸರೆಯರು ಸ್ವರ್ಗಕ್ಕೆ ಕರೆದುಕೊಂಡು ಹೋಗುವಂತೆ ಉಬ್ಬು ಕೆತ್ತನೆಯನ್ನು ಮಾಡಲಾಗಿದೆ. ಕೊನೆಯ ಪಟ್ಟಿಕೆಯಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಿರುವ ಗಜಗಳ ಶಿಲ್ಪಗಳನ್ನು ಕೆತ್ತಲಾಗಿದೆ.</p>.<p>ಅರುಣಾಚಲ ಕೋಣೆಕೊಪ್ಪ, ಪವನ್ ಆಚಾರ್ಯ ಸಹಕಾರ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಯಪುರ (ಬಾಳೆಹೊನ್ನೂರು)</strong>: ಕೊಪ್ಪ ತಾಲ್ಲೂಕಿನ ಭುವನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉತ್ತಮೇಶ್ವರದ ಕೋಣೆಕೊಪ್ಪ ಎಂಬಲ್ಲಿ 14ನೇ ಶತಮಾನಕ್ಕೆ ಸೇರಿದ ವೀರಗಲ್ಲನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ನ.ಸುರೇಶ ಕಲ್ಕೆರೆ ಪತ್ತೆ ಮಾಡಿದ್ದಾರೆ.</p>.<p>ಸುಮಾರು 5 ಅಡಿ ಎತ್ತರ ಮತ್ತು 2 ಅಡಿ ಅಗಲವಿರುವ ಈ ವೀರಗಲ್ಲು ಮೂರು ಪಟ್ಟಿಕೆಯನ್ನು ಹೊಂದಿದ್ದು, ಕೆಳಗಿನ ಪಟ್ಟಿಕೆಯಲ್ಲಿ ಎರಡು ಸಾಲಿನ ಕನ್ನಡ ಲಿಪಿ ಮತ್ತು ಭಾಷೆಯಲ್ಲಿರುವ ಶಾಸನವನ್ನು ಕಾಣಬಹುದು. ಈ ವೀರಗಲ್ಲಿನ ಹೆಚ್ಚಿನ ಅಕ್ಷರಗಳು ತೃಟಿತಗೊಂಡಿದ್ದು, ಉಳಿದಿರುವ ಅಕ್ಷರದ ಆಧಾರದ ಮೇಲೆ ‘ಭಾವ ಸಂವತ್ಸರದಲ್ಲಿ ತಿಂಮಣ ನಾಯಕನ’ ಸ್ಮರಣಾರ್ಥವಾಗಿ ವೀರಗಲ್ಲನ್ನು ಹಾಕಲಾಗಿದೆ ಎಂದು ಅಂದಾಜಿಸಲಾಗಿದೆ. ಈ ಲಿಪಿಯು 14ನೇ ಶತಮಾನದ ಲಿಪಿಯನ್ನು ಹೋಲುತ್ತದೆ ಎಂದು ಅವರು ತಿಳಿಸಿದ್ದಾರೆ.</p>.<p>ವೀರಗಲ್ಲಿನ ಕೆಳಗಿನ ಪಟ್ಟಿಕೆಯಲ್ಲಿ ಕೈಯಲ್ಲಿ ಖಡ್ಗವನ್ನು (ಕತ್ತಿ) ಹಿಡಿದುಕೊಂಡು ಅಶ್ವದ ಮೇಲೆ ಕುಳಿತು ಯುದ್ಧ ಮಾಡುತ್ತಿರುವ ವೀರ ಹಾಗೂ ಬಿಲ್ಲು-ಬಾಣಗಳನ್ನು ಹಿಡಿದುಕೊಂಡು ಈತನ ವಿರುದ್ಧ ಹೋರಾಡುತ್ತಿರುವ ಸೈನಿಕರ ಉಬ್ಬು ಶಿಲ್ಪವನ್ನು ಕೆತ್ತಲಾಗಿದೆ. ಎರಡನೇ ಪಟ್ಟಿಕೆಯಲ್ಲಿ ಯುದ್ಧದಲ್ಲಿ ಮರಣ ಹೊಂದಿದ ವೀರನನ್ನು ಅಪ್ಸರೆಯರು ಸ್ವರ್ಗಕ್ಕೆ ಕರೆದುಕೊಂಡು ಹೋಗುವಂತೆ ಉಬ್ಬು ಕೆತ್ತನೆಯನ್ನು ಮಾಡಲಾಗಿದೆ. ಕೊನೆಯ ಪಟ್ಟಿಕೆಯಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಿರುವ ಗಜಗಳ ಶಿಲ್ಪಗಳನ್ನು ಕೆತ್ತಲಾಗಿದೆ.</p>.<p>ಅರುಣಾಚಲ ಕೋಣೆಕೊಪ್ಪ, ಪವನ್ ಆಚಾರ್ಯ ಸಹಕಾರ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>