ಜಿಲ್ಲೆಯಲ್ಲಿರುವ ಹೋಟೆಲ್, ವಸತಿ ಗೃಹ, ಹೋಂ ಸ್ಟೇ, ರೆಸಾರ್ಟ್, ಟ್ಯಾಕ್ಸಿ, ಸೇರಿದಂತೆ ಪ್ರವಾಸೋದ್ಯಮ ಕ್ಷೇತ್ರದಲ್ಲಿರುವವವರನ್ನು ಒಂದೇ ವೇದಿಕೆಗೆ ತಂದು ಅವರಿಗೆ ಜಿಲ್ಲೆಯ ಪ್ರವಾಸೋದ್ಯಮದ ಸಮಗ್ರ ಮಾಹಿತಿ ನೀಡಿ ಭಾಗೀದಾರರನ್ನಾಗಿ ಮಾಡಲಾಗುವುದು, ಪ್ರವಾಸಿ ಗೈಡಗಳಿಗೆ ತರಬೇತಿ ನೀಡಿ, ಪ್ರವಾಸಿಗರಿಗೆ ಸಮರ್ಪಕ ಮಾಹಿತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ಪ್ರವಾಸೋದ್ಯಮ ಉತ್ತೇಜನಕ್ಕೆ ಜೂನ್ 25 ರಂದು ನಗರದ ಕುವೆಂಪು ಕಲಾಮಂದಿರದಲ್ಲಿ ನಾಟಕ ಆಯೋಜಿಸಲಾಗಿದೆ ಎಂದು ತಿಳಿಸಿದರು.