ಬೀರೂರು: ಕ್ರಿಸ್ತಶರಣ ಶಾಲೆಯಲ್ಲಿ ವಂದನೋತ್ಸವ

ಬೀರೂರು: ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳನ್ನು ಕ್ರಿಯಾಶೀಲ ಮನೋಭಾವದ ಮೂಲಕ ಸದೃಢಗೊಳಿಸಲು ಶಿಕ್ಷಕರು ಮತ್ತು ಪೋಷಕರು ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ್ ಹೇಳಿದರು.
ಪಟ್ಟಣದ ಶ್ರೀಗುರು ಕ್ರಿಸ್ತಶರಣ ಶಾಲೆಯಲ್ಲಿ ಶನಿವಾರ ಸಂಜೆ ನಡೆದ ವಂದನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಚಿಕ್ಕಮಗಳೂರಿನ ವಿನಯ್ಕುಮಾರ್ ಸ್ವಾಮೀಜಿ ಮಾತನಾಡಿ, ಗುರುವಿನ ಬೆಂಬಲದಿಂದ ಗುರಿಯೆಡೆಗೆ ಸಾಗುವುದೇ ದರ್ಶನ. ಮಕ್ಕಳು ಮನೆ, ಮನಸ್ಸು ಮತ್ತು ಸಮಾಜವನ್ನು ಬೆಳಗುವ ಹಣತೆಯಾಗಬೇಕು. ಪೋಷಕರು ತಮ್ಮ ಆಶಯವನ್ನು ಮಕ್ಕಳ ಮೇಲೆ ಹೇರದೇ ಅವರ ಪ್ರತಿಭೆಗೆ ಸಾಣೆ ಹಿಡಿದು ಅವರ ಆಸಕ್ತಿ ಇರುವ ಕ್ಷೇತ್ರದಲ್ಲಿ ಮುಂದುವರಿಯಲು ಅವಕಾಶ ಮಾಡಿಕೊಡಬೇಕು ಎಂದರು.
ಮುಖ್ಯಶಿಕ್ಷಕಿ ಫ್ಲಾವಿಯಾ ಲೋಬೊ ವಾರ್ಷಿಕ ವರದಿ ಮಂಡಿಸಿದರು. ಸಿಸ್ಟರ್ ಭಾರತಿ ಲೋಬೊ, ತಾರಾ ಸೆರಾವೊ, ಪೋಷಕರು ಇದ್ದರು. ಮಕ್ಕಳು ವಿವಿಧ ಸಾಂಸ್ಕೃತಿಕ ನೃತ್ಯಗಳು, ನಾಟಕ ಪ್ರದರ್ಶನ ನೀಡಿ ಗಮನ ಸೆಳೆದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.