<p><strong>ಕಡೂರು</strong>: ವಿಶ್ವವಿದ್ಯಾಲಯದ ಸ್ನಾತಕ ವಿಭಾಗದ ವಿದ್ಯಾರ್ಥಿಗಳಿಗೆ ಏಕರೂಪ ಪರೀಕ್ಷಾ ವೇಳಾಪಟ್ಟಿ ಜಾರಿಗೊಳಿಸುವಂತೆ ಒತ್ತಾಯಿಸಿ ಎಬಿವಿಪಿ ಘಟಕದ ಕಾರ್ಯಕರ್ತರು ಪಟ್ಟಣದ ಹೊರವಲಯದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರಕ್ಕೆ ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟಿಸಿದರು.</p>.<p>ಎಪಿವಿಪಿ ಘಟಕದ ತಾಲ್ಲೂಕು ಸಂಚಾಲಕ ರವಿತೇಜ ಮಾತನಾಡಿ, ‘ಸ್ಪಷ್ಟತೆ ಇಲ್ಲದೆ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಸ್ನಾತಕ ವಿಭಾಗದ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಪರೀಕ್ಷೆಯನ್ನು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಗಳ ಬೇಡಿಕೆಯಂತೆ ಏಕರೂಪ ವೇಳಾಪಟ್ಟಿಯನ್ನು ಜಾರಿಗೊಳಿಸಬೇಕಿದೆ. ಹೆಚ್ಚಳ ಮಾಡಿರುವ ಪರೀಕ್ಷಾ ಶುಲ್ಕವನ್ನು ಕೂಡಲೇ ಕಡಿಮೆಗೊಳಿಸಬೇಕೆಂದು ಒತ್ತಾಯಿಸಿದರು.</p>.<p>ಈ ಕುರಿತು ಮನವಿಯನ್ನು ಕಡೂರು ಪಿಜಿ ಸೆಂಟರ್ ನಿರ್ದೇಶಕ ಡಾ.ಸತ್ಯನಾರಾಯಣ್ ಅವರಿಗೆ ಸಲ್ಲಿಸಲಾಯಿತು.</p>.<p>ಎಬಿವಿಪಿ ಘಟಕದ ಪದಾಧಿಕಾರಿಗಳಾದ ಚಂದನ್, ಹೇಮಂತ್, ಭರತ್, ಚಂದು, ಸುಮಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು</strong>: ವಿಶ್ವವಿದ್ಯಾಲಯದ ಸ್ನಾತಕ ವಿಭಾಗದ ವಿದ್ಯಾರ್ಥಿಗಳಿಗೆ ಏಕರೂಪ ಪರೀಕ್ಷಾ ವೇಳಾಪಟ್ಟಿ ಜಾರಿಗೊಳಿಸುವಂತೆ ಒತ್ತಾಯಿಸಿ ಎಬಿವಿಪಿ ಘಟಕದ ಕಾರ್ಯಕರ್ತರು ಪಟ್ಟಣದ ಹೊರವಲಯದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರಕ್ಕೆ ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟಿಸಿದರು.</p>.<p>ಎಪಿವಿಪಿ ಘಟಕದ ತಾಲ್ಲೂಕು ಸಂಚಾಲಕ ರವಿತೇಜ ಮಾತನಾಡಿ, ‘ಸ್ಪಷ್ಟತೆ ಇಲ್ಲದೆ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಸ್ನಾತಕ ವಿಭಾಗದ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಪರೀಕ್ಷೆಯನ್ನು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಗಳ ಬೇಡಿಕೆಯಂತೆ ಏಕರೂಪ ವೇಳಾಪಟ್ಟಿಯನ್ನು ಜಾರಿಗೊಳಿಸಬೇಕಿದೆ. ಹೆಚ್ಚಳ ಮಾಡಿರುವ ಪರೀಕ್ಷಾ ಶುಲ್ಕವನ್ನು ಕೂಡಲೇ ಕಡಿಮೆಗೊಳಿಸಬೇಕೆಂದು ಒತ್ತಾಯಿಸಿದರು.</p>.<p>ಈ ಕುರಿತು ಮನವಿಯನ್ನು ಕಡೂರು ಪಿಜಿ ಸೆಂಟರ್ ನಿರ್ದೇಶಕ ಡಾ.ಸತ್ಯನಾರಾಯಣ್ ಅವರಿಗೆ ಸಲ್ಲಿಸಲಾಯಿತು.</p>.<p>ಎಬಿವಿಪಿ ಘಟಕದ ಪದಾಧಿಕಾರಿಗಳಾದ ಚಂದನ್, ಹೇಮಂತ್, ಭರತ್, ಚಂದು, ಸುಮಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>