ಆಲ್ದೂರು: ಪಟ್ಟಣದ ಸಮೀಪವಿರುವ ಹವ್ವಳ್ಳಿ ಗ್ರಾಮದಲ್ಲಿ 160ನೇ ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೃಥ್ವಿ ಸಂತೋಷ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸರೋಜಮ್ಮ, ಪಂಚಾಯಿತಿ ಸದಸ್ಯ ಗಿರೀಶ್, ಗ್ರಂಥಪಾಲಕ ಕೆಂಚಯ್ಯ, ವಿವೇಕಾನಂದ ಯುವಕ ಸಂಘದ ಅಧ್ಯಕ್ಷ ರಾಜೇಶ್ ಎಚ್.ಎಂ, ಸದಸ್ಯರು ಇದ್ದರು.
ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.