ಶಂಕರಕುಡಿಗೆಯಿಂದ ಪ್ರತಿದಿನ ಶಾಲೆಗೆ ತೆರಳಲು ಹತ್ತಾರು ಮಕ್ಕಳು, ಕೆಲಸಕ್ಕೆ ಹೋಗುವ ಕಾರ್ಮಿಕರು, ಆಸ್ಪತ್ರೆ ತಲುಪಬೇಕಾದ ರೋಗಿಗಳು, ಕೃಷಿ ಸಲಕರಣೆ ಕೊಂಡೊಯ್ಯಬೇಕಾದ ರೈತರು ಈ ರಸ್ತೆಯ ಅವ್ಯವಸ್ಥೆ ಬಗ್ಗೆ ರೋಸಿ ಹೋಗಿದ್ದಾರೆ. ಈ ರಸ್ತೆ ಅಗೆಯುವ ಮೊದಲು ತಕ್ಕ ಮಟ್ಟಿಗೆ ಉತ್ತಮ ಸ್ಥಿತಿಯಲ್ಲೇ ಇತ್ತು. ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕಾಗಿ ಅಗೆದು ಹಾಕಿದ ನಂತರ ದಪ್ಪ ಜಲ್ಲಿ ರಸ್ತೆ ತುಂಬೆಲ್ಲಾ ಹರಡಿ ಜನರ ಮತ್ತು ವಾಹನಗಳ ಸಂಚಾರಕ್ಕೆ ಅಸಾಧ್ಯ ಎಂಬಂತಾಗಿದೆ ಎಂಬುದು ಅವರ ದೂರು.