ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ, ‘ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಶಾಲೆಯ ಕಾರ್ಯಕ್ರಮಗಳು ಯಶಸ್ವಿಯಾಗಲಿ. ಸಾವಿರಾರು ಜನರಿಗೆ ವಿದ್ಯಾದಾನ ಮಾಡಿರುವ ಶಾಲೆ ಮತ್ತಷ್ಟು ಅಭಿವೃದ್ಧಿ ಹೊಂದಲಿ’ ಎಂದರು. ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ವಿಜಯಕುಮಾರ್, ಶೃಂಗೇರಿ ಸುಬ್ಬಣ್ಣ, ಕಿರಣ್, ಶ್ರೀನಿವಾಸ್, ಕೌಸ್ತುಭಾ ಭಟ್, ಶಾಲಾ ಸಮಿತಿ ಅಧ್ಯಕ್ಷ ಸುಧಾಕರ್, ಸದಸ್ಯರಾದ ಸದಾನಂದ, ನಳಿನಿ, ಶಿಕ್ಷಕ ವೆಂಕಟೇಶಮೂರ್ತಿ ಇದ್ದರು.