ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಂಜಪ್ಪ ಸ್ವಾಮಿ ಜಾತ್ರಾ ಮಹೋತ್ಸವ ಸಂಪನ್ನ

Last Updated 7 ಡಿಸೆಂಬರ್ 2022, 5:47 IST
ಅಕ್ಷರ ಗಾತ್ರ

ಅಜ್ಜಂಪುರ: ತಾಲ್ಲೂಕಿನ ಬಾಳಯ್ಯನ ಹೊಸೂರು ಗ್ರಾಮದಲ್ಲಿ ಮಂಗಳವಾರ ಜುಂಜಪ್ಪ ಸ್ವಾಮಿ ಜಾತ್ರಾ ಮಹೋತ್ಸವವು ನೂರಾರು ಭಕ್ತರ ಸಂಭ್ರಮ-ಸಡಗರ ಮತ್ತು ಭಕ್ತಿ-ಭಾವದ ನಡುವೆ ನಡೆಯಿತು.

ಸುತ್ತಮುತ್ತಲ ಹತ್ತಾರು ಗ್ರಾಮಗಳ ಭಕ್ತರು ದೇವರ ದರ್ಶನ ಪಡೆದು, ಹೂ-ಹಣ್ಣು ಅರ್ಪಿಸಿದರು. ದುಗ್ಗಲ ಹೊತ್ತು ಹರಕೆ ತೀರಿಸಿದರು. ‘ಜಾತ್ರೆಗೆ ಬಂದು, ದೇವರ ದರ್ಶನ ಪಡೆದು ಹೋದರೆ ಹುಳು-ಹುಪ್ಪಟೆ ಕಾಟ ತಪ್ಪುತ್ತದೆ. ಜಾನುವಾರುಗಳು ಆರೋಗ್ಯವಾಗಿರುತ್ತವೆ ಎಂಬ ನಂಬಿಕೆ ಇದೆ. ಆದ್ದರಿಂದ ಪ್ರತಿ ವರ್ಷವೂ ಜಾತ್ರೆ ವೇಳೆ ಮಕ್ಕಳ ಸಮೇತ ಬರುತ್ತೇವೆ’ ಎನ್ನುತ್ತಾರೆ ನಾರಣಾಪುರದ ಭಾಗ್ಯಮ್ಮ.

ಜಾತ್ರೆಗೆ ಬಸ್ ವ್ಯವಸ್ಥೆ ಇಲ್ಲದ ಹಿನ್ನೆಲೆ, ಭಕ್ತರು ಬೈಕ್, ಆಟೊ ಕಾರುಗಳ ಮೊರೆ ಹೋಗಿದ್ದರು. ಅನ್ನ ಸಂತರ್ಪಣೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT