ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಗೆ ಉರುಳಿದ ಕಾರು: ಚಾಲಕ ಸಾವು

Last Updated 21 ನವೆಂಬರ್ 2022, 7:41 IST
ಅಕ್ಷರ ಗಾತ್ರ

ನರಸಿಂಹರಾಜಪುರ: ತಾಲ್ಲೂಕಿನ ಬಾಳೆಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳುವಳ್ಳಿ ಸಮೀಪ ರಸ್ತೆ ಪಕ್ಕದಲ್ಲಿರುವ ಕೆರೆಗೆ ಕಾರು ಉರುಳಿಬಿದ್ದು, ಚಾಲಕ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ಮಂಡ್ಯ ಜಿಲ್ಲೆ ಮದ್ದೂರಿನ ನಿವಾಸಿ ಪ್ರವೀಣ್ (42) ಮೃತಪಟ್ಟವರು. ಮದ್ದೂರಿನ ವಕೀಲರಾದ ಸ್ವಾಮಿ, ಪ್ರಶಾಂತ್, ಉಮೇಶ್ ಕಾರಿನಲ್ಲಿ ದಾವಣಗೆರೆಗೆ ವಿವಾಹಕ್ಕೆ ತೆರಳಿದ್ದು ವಿವಾಹ ಮುಗಿಸಿಕೊಂಡು ಎನ್.ಆರ್.ಪುರದ ಮೂಲಕ ಹೊರನಾಡು ದೇವಸ್ಥಾನಕ್ಕೆ ತೆರಳುವಾಗ ಮುಳುವಳ್ಳಿ ಗ್ರಾಮದ ಸಮೀಪದ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣತಪ್ಪಿ ಕಾರು ಕೆರೆಗೆ ಉರುಳಿಬಿದ್ದಿದೆ. ಕಾರಿನಿಂದ ಹೊರ ಬಂದ ಮೂವರು ವಕೀಲರು ಈಜಿ ದಡ ಸೇರಿದರು. ಆದರೆ ವಾಹನ ಚಾಲನೆ ಮಾಡುತ್ತಿದ್ದ ಪ್ರವೀಣ್ ಸೀಟ್ ಬೆಲ್ಟ್ ತೆಗೆಯಲು ಸಾಧ್ಯವಾಗದಿದ್ದರಿಂದ ಕಾರಿನಿಂದ ಹೊರ ಬರಲು ಸಾಧ್ಯವಾಗದೆ ಮೃತಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT