ಈ ಮೆರವಣಿಗೆ ನಡೆದಿರುವ ಮಾಹಿತಿ ದೊರೆತ ಕೂಡಲೇ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೀಶ್, ಡಿವೈಎಸ್ಪಿ ಶೈಲೇಂದ್ರ, ತಹಶೀಲ್ದಾರ್ ಸುಮಂತ್ಕುಮಾರ್ ಅವರ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು. ‘ಮೌಢ್ಯ ನಿಷೇಧ ಕಾಯ್ದೆ ಜಾರಿಯಲ್ಲಿದ್ದು, ಈ ರೀತಿಯ ಅಮಾನುಷ ಆಚರಣೆಗಳಿಗೆ ಅವಕಾಶ ಇಲ್ಲ. ಆದರೂ ಆಚರಣೆ ಮಾಡಿರುವುದು ತಪ್ಪು’ ಎಂದು ದೇವಾಲಯ ಸಮಿತಿಯ ಸದಸ್ಯರಿಗೆ ಮನವರಿಕೆ ಮಾಡಿದರು.