ಸಂತೆಮೈದಾನವನ್ನು ಡಂಪಿಂಗ್ ಯಾರ್ಡ್ ಮಾಡಿರುವುದಕ್ಕೆ ವಿರೋಧ ಮಾಡಿದ್ದೇವೆ. ನಾಲ್ಕು ದಿನಗಳಲ್ಲಿ ಬೇರೆ ಜಾಗಕ್ಕೆ ಸ್ಥಳಾಂತರಿಸುವುದಾಗಿ ನಗರಸಭೆ ಅಧ್ಯಕ್ಷ, ಆಯುಕ್ತರು ಹೇಳಿದ್ದಾರೆ. 4 ದಿನಗಳ ಒಳಗೆ ಬೇರೆಡೆಗೆ ಕ್ರಮವಹಿಸದಿದ್ದಲ್ಲಿ ನಗರಸಭೆ ಕಚೇರಿ ಎದುರು ತ್ಯಾಜ್ಯ ಸುರಿದು ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ ಎಂದು ದಸಂಸ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್ ತಿಳಿಸಿದರು.