<p><strong>ಚಿಕ್ಕಮಗಳೂರು:</strong> ನಗರಾದ್ಯಂತ ಸ್ವಚ್ಛ ವಾಹಿನಿಗಳಲ್ಲಿ ಸಂಗ್ರಹಿಸಿದ ಸಂತೆ ಮೈದಾನ ಭಾಗದಲ್ಲಿ ಕಸ ಸಾಗಣೆ ವಾಹನಗಳಿಗೆ ವಿಲೇವಾರಿ ಮಾಡುವುದನ್ನು ವಿರೋಧಿಸಿ ಸ್ಥಳೀಯರು ನಗರಸಭೆ ಆಯಕ್ತರೊಂದಿಗೆ ವಾಗ್ವಾದ ನಡೆಸಿದರು.</p>.<p>ನಗರಸಭೆ ಅಧಿಕಾರಿಗಳ ವಿರುದ್ಧ ದಲಿತ ಸಂಘರ್ಷ ಸಮಿತಿ ಮುಖಂಡ ದಂಟರಮಕ್ಕಿ ಶ್ರೀನಿವಾಸ್, ಇತರರು ಆಕ್ರೋಶ ವ್ಯಕ್ತಪಡಿಸಿದರು. ಈ ಭಾಗದ ತಮಿಳು ಕಾಲೋನಿ ಇತರಡೆಗಳ ಹಲವರು ಈಚೆಗೆ ಕಾಯಿಲೆಯಾಗಿ ಚಿಕಿತ್ಸೆ ಪಡೆದಿದ್ದಾರೆ ಎಂದರು.</p>.<p>ಸಂತೆ ಮಾರುಕಟ್ಟೆ ಜನವಸತಿ ಪ್ರದೇಶವಾಗಿದೆ. ಪ್ರತಿ ಬುಧವಾರ ಸಂತೆ ನಡೆಯುತ್ತದೆ. ಮೀನು ಮಾರುಕಟ್ಟೆಯೂ ಇಲ್ಲಿದೆ. ಈ ಆವರಣದಲ್ಲಿ ತ್ಯಾಜ್ಯ ಸುರಿದು ಸಾಗಣೆ ವಾಹನಕ್ಕೆ ವಿಲೇವಾರಿ ಮಾಡುವಾಗ ಕಸ ಬೀಳುತ್ತದೆ. ಈ ಪ್ರದೇಶದಲ್ಲಿ ಕೊಳಕು ಹರಡುತ್ತದೆ. ಸೊಳ್ಳೆಗಳು ಹೆಚ್ಚುತ್ತವೆ. ಇದರಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಕೂಡಲೇ ಇಲ್ಲಿ ಡಂಪ್ ಮಾಡುವುದನ್ನು ನಿಲ್ಲಿಸಬೇಕು ಎಂದು ಸ್ಥಳೀಯರು ಪಟ್ಟು ಹಿಡಿದರು.</p>.<p>ನಗರಸಭೆ ಅಧ್ಯಕ್ಷ, ಆಯುಕ್ತ ಬಿ.ಸಿ.ಬಸವರಾಜು ಮತ್ತು ಸ್ಥಳೀಯರ ನಡುವೆ ವಾಗ್ವಾದ ನಡೆಯಿತು. ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಸ್ಥಳೀಯರು ಪೊಲೀಸರೊಂದಿಗೂ ವಾಗ್ವಾದ ನಡೆಸಿದರು. ನಂತರ ಪರಿಸ್ಥಿತಿ ತಿಳಿಗೊಳಿಸಿದರು.</p>.<p>‘4 ದಿನಗಳಲ್ಲಿ ಕ್ರಮವಹಿಸದಿದ್ದರೆ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ’</p>.<p>ಸಂತೆಮೈದಾನವನ್ನು ಡಂಪಿಂಗ್ ಯಾರ್ಡ್ ಮಾಡಿರುವುದಕ್ಕೆ ವಿರೋಧ ಮಾಡಿದ್ದೇವೆ. ನಾಲ್ಕು ದಿನಗಳಲ್ಲಿ ಬೇರೆ ಜಾಗಕ್ಕೆ ಸ್ಥಳಾಂತರಿಸುವುದಾಗಿ ನಗರಸಭೆ ಅಧ್ಯಕ್ಷ, ಆಯುಕ್ತರು ಹೇಳಿದ್ದಾರೆ. 4 ದಿನಗಳ ಒಳಗೆ ಬೇರೆಡೆಗೆ ಕ್ರಮವಹಿಸದಿದ್ದಲ್ಲಿ ನಗರಸಭೆ ಕಚೇರಿ ಎದುರು ತ್ಯಾಜ್ಯ ಸುರಿದು ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ ಎಂದು ದಸಂಸ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್ ತಿಳಿಸಿದರು.</p>.<p><strong>‘ವಾರದೊಳಗೆ ಬೇರೆಡೆಗೆ ಸ್ಥಳಾಂತರ’</strong></p>.<p>‘ಬಸವನಹಳ್ಳಿ ಕೆರೆ ಪಕ್ಕದಲ್ಲ ಜಾಗದ ಮೊದಲು ಡಂಪಿಂಗ್ ನಡೆಯುತ್ತಿತ್ತು. ಈಗ ಅಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ತಾತ್ಕಾಲಿಕವಾಗಿ ಸಂತೆ ಮೈದಾನದ ಭಾಗದಲ್ಲಿ ಮಾಡಲಾಗುತ್ತಿದೆ. ಇನ್ನೊಂದು ವಾರದಲ್ಲಿ ಬೇರೆ ಕಡೆಗೆ ಸ್ಥಳಾಂತರಿಸುತ್ತೇವೆ’ ಎಂದು ನಗರಸಭೆ ಆಯುಕ್ತ ಬಸವರಾಜು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ನಗರದ ಹೊರವಲಯದಲ್ಲಿ ಜಾಗ ಗುರುತಿಸಲಾಗುವುದು. ಅಲ್ಲಿಗೆ ಸ್ಥಳಾಂತರ ಮಾಡಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ನಗರಾದ್ಯಂತ ಸ್ವಚ್ಛ ವಾಹಿನಿಗಳಲ್ಲಿ ಸಂಗ್ರಹಿಸಿದ ಸಂತೆ ಮೈದಾನ ಭಾಗದಲ್ಲಿ ಕಸ ಸಾಗಣೆ ವಾಹನಗಳಿಗೆ ವಿಲೇವಾರಿ ಮಾಡುವುದನ್ನು ವಿರೋಧಿಸಿ ಸ್ಥಳೀಯರು ನಗರಸಭೆ ಆಯಕ್ತರೊಂದಿಗೆ ವಾಗ್ವಾದ ನಡೆಸಿದರು.</p>.<p>ನಗರಸಭೆ ಅಧಿಕಾರಿಗಳ ವಿರುದ್ಧ ದಲಿತ ಸಂಘರ್ಷ ಸಮಿತಿ ಮುಖಂಡ ದಂಟರಮಕ್ಕಿ ಶ್ರೀನಿವಾಸ್, ಇತರರು ಆಕ್ರೋಶ ವ್ಯಕ್ತಪಡಿಸಿದರು. ಈ ಭಾಗದ ತಮಿಳು ಕಾಲೋನಿ ಇತರಡೆಗಳ ಹಲವರು ಈಚೆಗೆ ಕಾಯಿಲೆಯಾಗಿ ಚಿಕಿತ್ಸೆ ಪಡೆದಿದ್ದಾರೆ ಎಂದರು.</p>.<p>ಸಂತೆ ಮಾರುಕಟ್ಟೆ ಜನವಸತಿ ಪ್ರದೇಶವಾಗಿದೆ. ಪ್ರತಿ ಬುಧವಾರ ಸಂತೆ ನಡೆಯುತ್ತದೆ. ಮೀನು ಮಾರುಕಟ್ಟೆಯೂ ಇಲ್ಲಿದೆ. ಈ ಆವರಣದಲ್ಲಿ ತ್ಯಾಜ್ಯ ಸುರಿದು ಸಾಗಣೆ ವಾಹನಕ್ಕೆ ವಿಲೇವಾರಿ ಮಾಡುವಾಗ ಕಸ ಬೀಳುತ್ತದೆ. ಈ ಪ್ರದೇಶದಲ್ಲಿ ಕೊಳಕು ಹರಡುತ್ತದೆ. ಸೊಳ್ಳೆಗಳು ಹೆಚ್ಚುತ್ತವೆ. ಇದರಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಕೂಡಲೇ ಇಲ್ಲಿ ಡಂಪ್ ಮಾಡುವುದನ್ನು ನಿಲ್ಲಿಸಬೇಕು ಎಂದು ಸ್ಥಳೀಯರು ಪಟ್ಟು ಹಿಡಿದರು.</p>.<p>ನಗರಸಭೆ ಅಧ್ಯಕ್ಷ, ಆಯುಕ್ತ ಬಿ.ಸಿ.ಬಸವರಾಜು ಮತ್ತು ಸ್ಥಳೀಯರ ನಡುವೆ ವಾಗ್ವಾದ ನಡೆಯಿತು. ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಸ್ಥಳೀಯರು ಪೊಲೀಸರೊಂದಿಗೂ ವಾಗ್ವಾದ ನಡೆಸಿದರು. ನಂತರ ಪರಿಸ್ಥಿತಿ ತಿಳಿಗೊಳಿಸಿದರು.</p>.<p>‘4 ದಿನಗಳಲ್ಲಿ ಕ್ರಮವಹಿಸದಿದ್ದರೆ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ’</p>.<p>ಸಂತೆಮೈದಾನವನ್ನು ಡಂಪಿಂಗ್ ಯಾರ್ಡ್ ಮಾಡಿರುವುದಕ್ಕೆ ವಿರೋಧ ಮಾಡಿದ್ದೇವೆ. ನಾಲ್ಕು ದಿನಗಳಲ್ಲಿ ಬೇರೆ ಜಾಗಕ್ಕೆ ಸ್ಥಳಾಂತರಿಸುವುದಾಗಿ ನಗರಸಭೆ ಅಧ್ಯಕ್ಷ, ಆಯುಕ್ತರು ಹೇಳಿದ್ದಾರೆ. 4 ದಿನಗಳ ಒಳಗೆ ಬೇರೆಡೆಗೆ ಕ್ರಮವಹಿಸದಿದ್ದಲ್ಲಿ ನಗರಸಭೆ ಕಚೇರಿ ಎದುರು ತ್ಯಾಜ್ಯ ಸುರಿದು ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ ಎಂದು ದಸಂಸ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್ ತಿಳಿಸಿದರು.</p>.<p><strong>‘ವಾರದೊಳಗೆ ಬೇರೆಡೆಗೆ ಸ್ಥಳಾಂತರ’</strong></p>.<p>‘ಬಸವನಹಳ್ಳಿ ಕೆರೆ ಪಕ್ಕದಲ್ಲ ಜಾಗದ ಮೊದಲು ಡಂಪಿಂಗ್ ನಡೆಯುತ್ತಿತ್ತು. ಈಗ ಅಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ತಾತ್ಕಾಲಿಕವಾಗಿ ಸಂತೆ ಮೈದಾನದ ಭಾಗದಲ್ಲಿ ಮಾಡಲಾಗುತ್ತಿದೆ. ಇನ್ನೊಂದು ವಾರದಲ್ಲಿ ಬೇರೆ ಕಡೆಗೆ ಸ್ಥಳಾಂತರಿಸುತ್ತೇವೆ’ ಎಂದು ನಗರಸಭೆ ಆಯುಕ್ತ ಬಸವರಾಜು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ನಗರದ ಹೊರವಲಯದಲ್ಲಿ ಜಾಗ ಗುರುತಿಸಲಾಗುವುದು. ಅಲ್ಲಿಗೆ ಸ್ಥಳಾಂತರ ಮಾಡಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>